ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ಲೆಫ್ಟಿನೆಂಟ್ ಗವರ್ನರ್ ಸೋಗಿನಲ್ಲಿ ಶಿಕ್ಷಕಿ ಹುದ್ದೆಗೆ ಸಹೋದರಿ ಹೆಸರು ಶಿಫಾರಸು, ಸಹಾಯಕ ಪ್ರಾಧ್ಯಾಪಕನ ವಿರುದ್ಧ ದೂರು ದಾಖಲು

ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಎಂದು ಬಿಂಬಿಸಿಕೊಳ್ಳುವ ಮೂಲಕ ತನ್ನ ಸಹೋದರಿಯ ಹೆಸರನ್ನು ಶಿಕ್ಷಕಿ ಹುದ್ದೆಗೆ ಶಿಫಾರಸು ಮಾಡಿದ ಆರೋಪದಲ್ಲಿ ದೆಹಲಿ ಪೊಲೀಸರು ಇಲ್ಲಿನ ಗುರು ಗೋಬಿಂದ್ ಸಿಂಗ್ ಇಂದ್ರಪ್ರಸ್ಥ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಎಲ್‌ಜಿ ಸಚಿವಾಲಯ ಶುಕ್ರವಾರ ತಿಳಿಸಿದೆ. 

ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಎಂದು ಬಿಂಬಿಸಿಕೊಳ್ಳುವ ಮೂಲಕ ತನ್ನ ಸಹೋದರಿಯ ಹೆಸರನ್ನು ಶಿಕ್ಷಕಿ ಹುದ್ದೆಗೆ ಶಿಫಾರಸು ಮಾಡಿದ ಆರೋಪದಲ್ಲಿ ದೆಹಲಿ ಪೊಲೀಸರು ಇಲ್ಲಿನ ಗುರು ಗೋಬಿಂದ್ ಸಿಂಗ್ ಇಂದ್ರಪ್ರಸ್ಥ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಎಲ್‌ಜಿ ಸಚಿವಾಲಯ ಶುಕ್ರವಾರ ತಿಳಿಸಿದೆ. 

ವಿಶ್ವವಿದ್ಯಾಲಯದ ಇಂಗ್ಲೀಷ್  ವಿಭಾಗದಲ್ಲಿ ತಾನೂ ಹೇಳಿದ ಅಭ್ಯರ್ಥಿಗೆ ಹುದ್ದೆ ನೀಡುವಂತೆ ಲೆಫ್ಟಿನೆಂಟ್ ಗವರ್ನರ್ ಸೋಗಿನಲ್ಲಿ ಸೆಪ್ಟೆಂಬರ್ 30 ಅಂದು ಅಪರಿಚಿತ ವ್ಯಕ್ತಿಯೊಬ್ಬರಿಂದ ಕುಲಪತಿ ಮಹೇಶ್ ವರ್ಮಾ ಅವರಿಗೆ ಕರೆ ಮಾಡಲಾಗಿತ್ತು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಕರೆ ಸತ್ಯಾಸತ್ಯತೆ ಖಚಿತಪಡಿಸಿಕೊಳ್ಳಲು ಕುಲಪತಿ ಲೆಫ್ಟಿನೆಂಟ್ ಗವರ್ನರ್ ಸಚಿವಾಲಯವನ್ನು ಸಂಪರ್ಕಿಸಿದ್ದಾರೆ. ಆ ಸಂದರ್ಭದಲ್ಲಿ ಅಂತಹ ಯಾವುದೇ ಕರೆ ಮಾಡಿಲ್ಲ ಎಂಬುದು ತಿಳಿದುಬಂದ ನಂತರ ಪೊಲೀಸರಿಗೆ ದೂರು ನೀಡಲಾಗಿತ್ತು. 

ಲೆಫ್ಟಿನೆಂಟ್ ಗವರ್ನರ್ ಸೋಗಿನಲ್ಲಿ ಕರೆ ಮಾಡಿದ್ದಕ್ಕೆ ಅಕ್ಟೋಬರ್ 2 ರಂದು ದ್ವಾರಕಾ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿತ್ತು. ನಂತರ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಯಿತು. "ತನಿಖೆಯ ಸಮಯದಲ್ಲಿ,  ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಆರೋಪಿ ಎಂದು ಗುರುತಿಸಲಾಗಿದೆ. ಅವರು ಲೆಫ್ಟಿನೆಂಟ್ ಗವರ್ನರ್ ಸೋಗಿನಲ್ಲಿ ವಿಶ್ವವಿದ್ಯಾನಿಲಯದ ಇಂಗ್ಲಿಷ್ ವಿಭಾಗದಲ್ಲಿ ತನ್ನ ಸಹೋದರಿಯ ನೇಮಕಾತಿಗಾಗಿ ಕರೆ ಮಾಡಿದ್ದರು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹಾರ್ಮುಜ್ ಜಲಸಂಧಿ' ದಿಗ್ಬಂಧನ ನಡುವೆ ಟ್ರಂಪ್-ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ! ಏನೆಲ್ಲಾ ಮಾತುಕತೆ ಆಯ್ತು?

ಅಮೆರಿಕದ ಹಾರ್ಮುಜ್ ದಿಗ್ಬಂಧನದಿಂದ ಇರಾನ್‌ಗೆ ದಿನಕ್ಕೆ ಅಂದಾಜು $435 ಮಿಲಿಯನ್ ನಷ್ಟ; ಆದರೂ ದೀರ್ಘಾವಧಿಯ ಬ್ಲಾಕೇಡ್ ಕಷ್ಟ!

ತಿರುಪ್ಪೂರ್: ಟಿವಿಕೆ ವಿಜಯ್ ಪ್ರಚಾರ ಕಾರ್ಯಕ್ರಮದಲ್ಲಿ ಮಾತ್ತೊಂದು ಅವಘಡ: ಕುಸಿದುಬಿದ್ದು 15 ಮಂದಿ ಆಸ್ಪತ್ರೆಗೆ ದಾಖಲು!

IPL 2026: ತವರು ನೆಲದಲ್ಲಿ ಕೆಕೆಆರ್ ವಿರುದ್ಧ ಗೆದ್ದು ಬೀಗಿದ CSK!

ನವದೆಹಲಿ: ಸಂಪುಟ ಪುನರ್ ರಚನೆಗೆ ಪಟ್ಟು, ಹಿರಿಯ ನಾಯಕರೊಂದಿಗೆ ಚರ್ಚಿಸದೆ ಬೆಂಗಳೂರಿಗೆ ವಾಪಸ್ ಆಗಲ್ಲ: ಅಶೋಕ್ ಪಟ್ಟಣ್

SCROLL FOR NEXT