ಅಗ್ನಿಪಥ್ ಯೋಜನೆ 
ದೇಶ

ಅಗ್ನಿವೀರ್ ವೇತನ ಪ್ಯಾಕೇಜ್‌ಗಾಗಿ 11 ಬ್ಯಾಂಕ್‌ಗಳೊಂದಿಗಿನ ಒಪ್ಪಂದಕ್ಕೆ ಭಾರತೀಯ ಸೇನೆ ಸಹಿ!

ಅಗ್ನಿವೀರ್ ವೇತನ ಪ್ಯಾಕೇಜ್‌ಗಾಗಿ ಭಾರತೀಯ ಸೇನೆಯು 11 ಬ್ಯಾಂಕ್‌ಗಳೊಂದಿಗೆ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದೆ.

ನವದೆಹಲಿ: ಅಗ್ನಿವೀರ್ ವೇತನ ಪ್ಯಾಕೇಜ್‌ಗಾಗಿ ಭಾರತೀಯ ಸೇನೆಯು 11 ಬ್ಯಾಂಕ್‌ಗಳೊಂದಿಗೆ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದೆ. 

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಐಡಿಬಿಐ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಯೆಸ್ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್, ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಮತ್ತು ಬಂಧನ್ ಬ್ಯಾಂಕ್ ಈ ಒಪ್ಪಂದಕ್ಕೆ ಸಹಿ ಹಾಕಿರುವ 11 ಬ್ಯಾಂಕ್‌ಗಳಾಗಿವೆ.

ಈ ಬ್ಯಾಂಕುಗಳು ಅಗ್ನಿವೀರರಿಗೆ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುತ್ತವೆ. ಲೆಫ್ಟಿನೆಂಟ್ ಜನರಲ್ ವಿ ಶ್ರೀಹರಿ, ಡಿಜಿ(ಎಪಿ ಮತ್ತು ಪಿಎಸ್) ಮತ್ತು ಬ್ಯಾಂಕ್‌ಗಳ ಹಿರಿಯ ಅಧಿಕಾರಿಗಳ ನಡುವೆ ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಅಗ್ನಿವೀರ್ ಸಂಬಳ ಪ್ಯಾಕೇಜ್ ಅಡಿಯಲ್ಲಿ ನೀಡಲಾಗುವ ಸೌಲಭ್ಯಗಳು ಮತ್ತು ಪ್ರಯೋಜನಗಳು ರಕ್ಷಣಾ ವೇತನದ ಪ್ಯಾಕೇಜ್‌ಗೆ ಹೋಲುತ್ತವೆ.

ಹೆಚ್ಚುವರಿಯಾಗಿ, ನಿರ್ಗಮಿಸುವ ಅಗ್ನಿವೀರ್‌ಗಳ ಉದ್ಯಮಶೀಲತಾ ಕೌಶಲ್ಯಗಳನ್ನು ಉತ್ತೇಜಿಸಲು ಮತ್ತು ಹೆಚ್ಚಿಸಲು ಬ್ಯಾಂಕುಗಳು ಲಘು ಸಾಲಗಳನ್ನು ನೀಡುತ್ತವೆ. ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿಪಥ್‌ನ ಮೊದಲ ಬ್ಯಾಚ್ ಜನವರಿ 2023ರೊಳಗೆ ತರಬೇತಿ ಕೇಂದ್ರಗಳಿಗೆ ಸೇರಲಿವೆ.

ಏನಿದು ಅಗ್ನಿಪಥ್ ಯೋಜನೆ?
ಕಳೆದ ಜೂನ್ 14ರಂದು ಕೇಂದ್ರ ಸರ್ಕಾರ 'ಅಗ್ನಿಪಥ್' ಯೋಜನೆಯನ್ನು ಘೋಷಿಸಿತ್ತು. ಯೋಜನೆಯಡಿಯಲ್ಲಿ, ಹದಿನೇಳುವರೆ ವರ್ಷದಿಂದ 21 ವರ್ಷ ವಯಸ್ಸಿನ ಯುವಕರನ್ನು ನಾಲ್ಕು ವರ್ಷಗಳ ಅವಧಿಗೆ ಸಶಸ್ತ್ರ ಪಡೆಗಳಿಗೆ ಸೇರಿಸಲಾಗುತ್ತದೆ. ಇವುಗಳಲ್ಲಿ, 25 ಪ್ರತಿಶತವನ್ನು ನಂತರ ನಿಯಮಿತ ಸೇವೆಗೆ ಸೇರಿಸಲಾಗುತ್ತದೆ. ನಂತರ ಸರ್ಕಾರವು ಈ ಯೋಜನೆಯಡಿಯಲ್ಲಿ ನೇಮಕಾತಿಗಾಗಿ ಗರಿಷ್ಠ ವಯಸ್ಸಿನ ಮಿತಿಯನ್ನು 2022 ವರ್ಷಕ್ಕೆ 21 ವರ್ಷದಿಂದ 23 ವರ್ಷಗಳಿಗೆ ಹೆಚ್ಚಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT