ದೇಶ

ಜಮ್ಮು ಮತ್ತು ಕಾಶ್ಮೀರ: ಶೋಪಿಯಾನ್‌ನಲ್ಲಿ ಉಗ್ರರಿಂದ ಕಾಶ್ಮೀರಿ ಪಂಡಿತ ವ್ಯಕ್ತಿಯ ಹತ್ಯೆ

Ramyashree GN

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತರೊಬ್ಬರನ್ನು  ಉಗ್ರರು ಶನಿವಾರ ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಚೌಧರಿ ಗುಂಡ್ ಪ್ರದೇಶದ ಅವರ ನಿವಾಸದ ಬಳಿ ಪುರನ್ ಕ್ರಿಶನ್ ಭಟ್ ಎಂಬುವವರ ಮೇಲೆ ದಾಳಿ ನಡೆಸಲಾಯಿತು. ಕೂಡಲೇ ಅವರನ್ನು ಶೋಪಿಯಾನ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆ ವೇಳೆಗಾಗಲೇ ಕ್ರಿಶನ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಸದ್ಯ ಆ ಪ್ರದೇಶವನ್ನು ಸುತ್ತುವರಿಯಲಾಗಿದ್ದು, ದಾಳಿಕೋರರನ್ನು ಹಿಡಿಯಲು ಶೋಧಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

SCROLL FOR NEXT