ಸಾಂದರ್ಭಿಕ ಚಿತ್ರ 
ದೇಶ

ಬಿಹಾರದಲ್ಲಿ ದೋಣಿ ಮಗುಚಿ ಅವಘಡ: ಏಳು ಮಂದಿ ಕೃಷಿ ಕಾರ್ಮಿಕರು ಸಾವು

ಬಿಹಾರದಲ್ಲಿ ಗಂಗಾನದಿ ಮತ್ತು ಅದರ ಉಪನದಿಗಳ ಸಂಗಮದಲ್ಲಿ ದೋಣಿ ಮುಳುಗಿ ಏಳು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಕತಿಹಾರ್: ಬಿಹಾರದಲ್ಲಿ ಗಂಗಾನದಿ ಮತ್ತು ಅದರ ಉಪನದಿಗಳ ಸಂಗಮದಲ್ಲಿ ದೋಣಿ ಮುಳುಗಿ ಏಳು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಕತಿಹಾರ್‌ನ ಜಿಲ್ಲಾಧಿಕಾರಿ ಉಜ್ಜಯಿನಿ ಮಿಶ್ರಾ ಅವರ ಪ್ರಕಾರ, 'ದೋಣಿ 10 ಜನರನ್ನು ಹೊತ್ತೊಯ್ಯುತ್ತಿತ್ತು. ಇವರೆಲ್ಲ ಕೃಷಿ ಕಾರ್ಮಿಕರಾಗಿದ್ದು, ಕೆಲಸದಿಂದ ಹಿಂತಿರುಗುತ್ತಿದ್ದರು. ಶನಿವಾರ ತಡರಾತ್ರಿ ಗಂಗಾ ಮತ್ತು ಬಾರಾಂಡಿಯ ಸಂಗಮದಲ್ಲಿ ದೋಣಿ ಮುಳುಗಿದೆ' ಎಂದು ತಿಳಿಸಿದ್ದಾರೆ.

ಅವಘಡದಲ್ಲಿ, ದೋಣಿಯಲ್ಲಿದ್ದ ಮೂವರು ಈಜಿ ಸುರಕ್ಷಿತವಾಗಿ ದಡ ಸೇರಿದ್ದಾರೆ. ಆದರೆ, ಉಳಿದ ಏಳು ಮಂದಿ ನಾಪತ್ತೆಯಾಗಿದ್ದಾರೆ. ಸ್ಥಳೀಯ ಡೈವರ್‌ಗಳು ಮತ್ತು ಎನ್‌ಡಿಆರ್‌ಎಫ್ ಸಿಬ್ಬಂದಿಯ ಸಹಾಯದಿಂದ ರಾತ್ರಿಯಿಡೀ ನಡೆದ ಶೋಧ ಕಾರ್ಯಾಚರಣೆಯ ನಂತರ ಮೃತದೇಹಗಳನ್ನು ಹೊರತೆಗೆಯಲಾಯಿತು ಎಂದು ಅವರು ಹೇಳಿದರು.

ಈಮಧ್ಯೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಪ್ರತಿ ಮೃತರ ಕುಟುಂಬಕ್ಕೆ 4 ಲಕ್ಷ ರೂ.ಗಳ ಪರಿಹಾರವನ್ನು ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT