ಸಾಂದರ್ಭಿಕ ಚಿತ್ರ 
ದೇಶ

ಬಿಹಾರದಲ್ಲಿ ದೋಣಿ ಮಗುಚಿ ಅವಘಡ: ಏಳು ಮಂದಿ ಕೃಷಿ ಕಾರ್ಮಿಕರು ಸಾವು

ಬಿಹಾರದಲ್ಲಿ ಗಂಗಾನದಿ ಮತ್ತು ಅದರ ಉಪನದಿಗಳ ಸಂಗಮದಲ್ಲಿ ದೋಣಿ ಮುಳುಗಿ ಏಳು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಕತಿಹಾರ್: ಬಿಹಾರದಲ್ಲಿ ಗಂಗಾನದಿ ಮತ್ತು ಅದರ ಉಪನದಿಗಳ ಸಂಗಮದಲ್ಲಿ ದೋಣಿ ಮುಳುಗಿ ಏಳು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಕತಿಹಾರ್‌ನ ಜಿಲ್ಲಾಧಿಕಾರಿ ಉಜ್ಜಯಿನಿ ಮಿಶ್ರಾ ಅವರ ಪ್ರಕಾರ, 'ದೋಣಿ 10 ಜನರನ್ನು ಹೊತ್ತೊಯ್ಯುತ್ತಿತ್ತು. ಇವರೆಲ್ಲ ಕೃಷಿ ಕಾರ್ಮಿಕರಾಗಿದ್ದು, ಕೆಲಸದಿಂದ ಹಿಂತಿರುಗುತ್ತಿದ್ದರು. ಶನಿವಾರ ತಡರಾತ್ರಿ ಗಂಗಾ ಮತ್ತು ಬಾರಾಂಡಿಯ ಸಂಗಮದಲ್ಲಿ ದೋಣಿ ಮುಳುಗಿದೆ' ಎಂದು ತಿಳಿಸಿದ್ದಾರೆ.

ಅವಘಡದಲ್ಲಿ, ದೋಣಿಯಲ್ಲಿದ್ದ ಮೂವರು ಈಜಿ ಸುರಕ್ಷಿತವಾಗಿ ದಡ ಸೇರಿದ್ದಾರೆ. ಆದರೆ, ಉಳಿದ ಏಳು ಮಂದಿ ನಾಪತ್ತೆಯಾಗಿದ್ದಾರೆ. ಸ್ಥಳೀಯ ಡೈವರ್‌ಗಳು ಮತ್ತು ಎನ್‌ಡಿಆರ್‌ಎಫ್ ಸಿಬ್ಬಂದಿಯ ಸಹಾಯದಿಂದ ರಾತ್ರಿಯಿಡೀ ನಡೆದ ಶೋಧ ಕಾರ್ಯಾಚರಣೆಯ ನಂತರ ಮೃತದೇಹಗಳನ್ನು ಹೊರತೆಗೆಯಲಾಯಿತು ಎಂದು ಅವರು ಹೇಳಿದರು.

ಈಮಧ್ಯೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಪ್ರತಿ ಮೃತರ ಕುಟುಂಬಕ್ಕೆ 4 ಲಕ್ಷ ರೂ.ಗಳ ಪರಿಹಾರವನ್ನು ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCCಗೆ ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

ನಾವು ಕಳವಳ ವ್ಯಕ್ತಪಡಿಸಿದೆವು, ಆದ್ರೆ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದರು: ಸಚಿವ ಎಚ್.ಕೆ.ಪಾಟೀಲ್

ಗ್ಯಾಂಗ್ ರೇಪ್ ಪ್ರಕರಣ: ವಿವಾದಿತ ದೇವಮಾನವ Asaram Bapu ಖುಲಾಸೆ

SCROLL FOR NEXT