ಸಾಂದರ್ಭಿಕ ಚಿತ್ರ 
ದೇಶ

ಬಿಹಾರದಲ್ಲಿ ದೋಣಿ ಮಗುಚಿ ಅವಘಡ: ಏಳು ಮಂದಿ ಕೃಷಿ ಕಾರ್ಮಿಕರು ಸಾವು

ಬಿಹಾರದಲ್ಲಿ ಗಂಗಾನದಿ ಮತ್ತು ಅದರ ಉಪನದಿಗಳ ಸಂಗಮದಲ್ಲಿ ದೋಣಿ ಮುಳುಗಿ ಏಳು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಕತಿಹಾರ್: ಬಿಹಾರದಲ್ಲಿ ಗಂಗಾನದಿ ಮತ್ತು ಅದರ ಉಪನದಿಗಳ ಸಂಗಮದಲ್ಲಿ ದೋಣಿ ಮುಳುಗಿ ಏಳು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಕತಿಹಾರ್‌ನ ಜಿಲ್ಲಾಧಿಕಾರಿ ಉಜ್ಜಯಿನಿ ಮಿಶ್ರಾ ಅವರ ಪ್ರಕಾರ, 'ದೋಣಿ 10 ಜನರನ್ನು ಹೊತ್ತೊಯ್ಯುತ್ತಿತ್ತು. ಇವರೆಲ್ಲ ಕೃಷಿ ಕಾರ್ಮಿಕರಾಗಿದ್ದು, ಕೆಲಸದಿಂದ ಹಿಂತಿರುಗುತ್ತಿದ್ದರು. ಶನಿವಾರ ತಡರಾತ್ರಿ ಗಂಗಾ ಮತ್ತು ಬಾರಾಂಡಿಯ ಸಂಗಮದಲ್ಲಿ ದೋಣಿ ಮುಳುಗಿದೆ' ಎಂದು ತಿಳಿಸಿದ್ದಾರೆ.

ಅವಘಡದಲ್ಲಿ, ದೋಣಿಯಲ್ಲಿದ್ದ ಮೂವರು ಈಜಿ ಸುರಕ್ಷಿತವಾಗಿ ದಡ ಸೇರಿದ್ದಾರೆ. ಆದರೆ, ಉಳಿದ ಏಳು ಮಂದಿ ನಾಪತ್ತೆಯಾಗಿದ್ದಾರೆ. ಸ್ಥಳೀಯ ಡೈವರ್‌ಗಳು ಮತ್ತು ಎನ್‌ಡಿಆರ್‌ಎಫ್ ಸಿಬ್ಬಂದಿಯ ಸಹಾಯದಿಂದ ರಾತ್ರಿಯಿಡೀ ನಡೆದ ಶೋಧ ಕಾರ್ಯಾಚರಣೆಯ ನಂತರ ಮೃತದೇಹಗಳನ್ನು ಹೊರತೆಗೆಯಲಾಯಿತು ಎಂದು ಅವರು ಹೇಳಿದರು.

ಈಮಧ್ಯೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಪ್ರತಿ ಮೃತರ ಕುಟುಂಬಕ್ಕೆ 4 ಲಕ್ಷ ರೂ.ಗಳ ಪರಿಹಾರವನ್ನು ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT