ಯಾತ್ರೆಯಲ್ಲಿ ರಾಹುಲ್ ಗಾಂಧಿ 
ದೇಶ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಬಳ್ಳಾರಿಯಲ್ಲಿ ಮತ ಚಲಾಯಿಸಲಿದ್ದಾರೆ ರಾಹುಲ್ ಗಾಂಧಿ

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ(ಅಕ್ಟೋಬರ್ 17) ಚುನಾವಣೆ ನಡೆಯಲಿದ್ದು, ಭಾರತ್ ಜೋಡೋ ಯಾತ್ರೆಯಲ್ಲಿ ನಡೆಸುತ್ತಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬಳ್ಳಾರಿಯಲ್ಲಿ ತಾವು ತಂಗಿರುವ ಶಿಬಿರದಲ್ಲಿಯೇ...

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ(ಅಕ್ಟೋಬರ್ 17) ಚುನಾವಣೆ ನಡೆಯಲಿದ್ದು, ಭಾರತ್ ಜೋಡೋ ಯಾತ್ರೆಯಲ್ಲಿ ನಡೆಸುತ್ತಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬಳ್ಳಾರಿಯಲ್ಲಿ ತಾವು ತಂಗಿರುವ ಶಿಬಿರದಲ್ಲಿಯೇ ಮತ ಚಲಾಯಿಸಲಿದ್ದು, ನಿರ್ಗಮಿತ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಮತ ಚಲಾಯಿಸಲಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿರುವ ರಾಹುಲ್ ಗಾಂಧಿ ಹಾಗೂ ಸುಮಾರು 40 ಪಿಸಿಸಿ ಪ್ರತಿನಿಧಿಗಳು ಬಳ್ಳಾರಿಯ ಸಂಗನಕಲ್ಲುನಲ್ಲಿರುವ ಯಾತ್ರೆಯ ಶಿಬಿರದಲ್ಲಿ ಮತದಾನ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಹ ದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ಮತ ಚಲಾಯಿಸಲಿದ್ದಾರೆ.

ಅಕ್ಟೋಬರ್ 17 ರಂದು ನಡೆಯಲಿರುವ ಚುನಾವಣೆಗೆ ಎಲ್ಲಾ ರಾಜ್ಯಗಳಲ್ಲಿ 67 ಬೂತ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರ(ಸಿಇಎ) ತಿಳಿಸಿದೆ.

ಸಿಇಎ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಮಾತನಾಡಿ, ‘ಎಐಸಿಸಿಯಲ್ಲೂ ಪ್ರಮುಖವಾಗಿ ಎಲ್ಲ ಹಿರಿಯ ನಾಯಕರು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಬೇರೆ ರಾಜ್ಯದವರಾಗಿದ್ದು, ದೆಹಲಿಯಲ್ಲಿ ನೆಲೆಸಿರುವ ಗುರುತಿನ ಚೀಟಿ ಹೊಂದಿರುವ ಎಲ್ಲರೂ ಎಐಸಿಸಿ ಕಚೇರಿಯಲ್ಲಿ ಮತ ಚಲಾಯಿಸಬಹುದು ಎಂದು ತಿಳಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿರುವ ರಾಹುಲ್ ಗಾಂಧಿ ಹಾಗೂ ಇತರರಿಗೆ ಕ್ಯಾಂಪ್ ನಲ್ಲಿಯೇ ಬೂತ್ ಸ್ಥಾಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT