ಸಂಗ್ರಹ ಚಿತ್ರ 
ದೇಶ

ಪಾದಚಾರಿ ಮೇಲ್ಸೇತುವೆ ಇಲ್ಲದೆ ಹಳಿ ದಾಟುವಾಗ ರೈಲಿಗೆ ಸಿಲುಕಿದ ಪ್ರಯಾಣಿಕರು ಪರಿಹಾರಕ್ಕೆ ಅರ್ಹರು: ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು

ಪಾದಚಾರಿ ಮೇಲ್ಸೇತುವೆ ಇಲ್ಲದೆ ಹಳಿ ದಾಟುವಾಗ ರೈಲಿಗೆ ಸಿಲುಕಿದ ಪ್ರಯಾಣಿಕರು ಪರಿಹಾರಕ್ಕೆ ಅರ್ಹರು ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಮುಂಬೈ: ಪಾದಚಾರಿ ಮೇಲ್ಸೇತುವೆ ಇಲ್ಲದೆ ಹಳಿ ದಾಟುವಾಗ ರೈಲಿಗೆ ಸಿಲುಕಿದ ಪ್ರಯಾಣಿಕರು ಪರಿಹಾರಕ್ಕೆ ಅರ್ಹರು ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಪಾದಚಾರಿ ಮೇಲ್ಸೇತುವೆ ಇಲ್ಲದ ಕಾರಣ ನಿಲ್ದಾಣದಿಂದ ನಿರ್ಗಮಿಸುವುದಕ್ಕಾಗಿ ವಿಧಿಯಿಲ್ಲದೆ ರೈಲು ಹಳಿ ದಾಟಿ ಅಪಘಾತಕ್ಕೀಡಾದರೆ ಅಂತಹ ಪ್ರಯಾಣಿಕರು ರೈಲ್ವೆ ಕಾಯಿದೆಯಡಿ ಪರಿಹಾರ ಪಡೆಯಲು ಅರ್ಹರು ಎಂದು ಬಾಂಬೆ ಹೈಕೋರ್ಟ್‌ ಇತ್ತೀಚೆಗೆ ತೀರ್ಪು ನೀಡಿದೆ. ಅಂತಹ ಪ್ರಯಾಣಿಕರನ್ನು ನಿರ್ಲಕ್ಷ್ಯ ತೋರಿದ ಪ್ರಯಾಣಿಕ ಎನ್ನಲಾಗದು ಎಂದು ಬಾಂಬೆ ಹೈಕೋರ್ಟ್‌ ನಾಗಪುರ ಪೀಠದ ಏಕಸದಸ್ಯ ನ್ಯಾಯಮೂರ್ತಿ ಅಭಯ್‌ ಅಹುಜಾ ತಿಳಿಸಿದ್ದಾರೆ.

"ಹಳ್ಳಿಯೊಂದರಿಂದ ಉದ್ಯೋಗ ಅರಸಿ ಬರುವ ವ್ಯಕ್ತಿಯೊಬ್ಬ, ಅಧಿಕೃತ ಟಿಕೆಟ್‌ ಪಡೆದು ಪ್ಯಾಸೆಂಜರ್ ರೈಲಿನಲ್ಲಿ ಪಯಣಿಸಿ, ಮೇಲ್ಸೇತುವೆ ಇಲ್ಲದ ಕಾರಣ ರೈಲು ನಿಲ್ದಾಣದಿಂದ ನಿರ್ಗಮಿಸಲು ಯತ್ನಿಸುವಾಗ ಹಳಿಗಳ ಮೇಲೆ ವಿಧಿಯಿಲ್ಲದೆ ನಡೆಯುವಂತಾಗಿ ರೈಲೊಂದು ಡಿಕ್ಕಿ ಹೊಡೆದು ಸತ್ತರೆ ಆತ ಉದ್ದೇಶ ಪೂರ್ವಕವಾಗಿ ಅಸಡ್ಡೆ ಅಥವಾ ನಿರ್ಲಕ್ಷ್ಯ ತೋರಿದ ಎನ್ನಲಾಗದು” ಎಂದು ನ್ಯಾಯಮೂರ್ತಿಗಳು ಅಕ್ಟೋಬರ್ 10ರಂದು ನೀಡಿದ ಆದೇಶದಲ್ಲಿ ವಿವರಿಸಿದ್ದಾರೆ.
 
ಈ ಮೂಲಕ, ʼಅಧಿಕೃತ ಟಿಕೆಟ್‌ನೊಂದಿಗೆ ಪಯಣಿಸಿದ್ದ ಪ್ರಯಾಣಿಕರು ರೈಲು ಹಳಿ ಮೇಲೆ ನಿರ್ಲಕ್ಷ್ಯದಿಂದ ವರ್ತಿಸಿದರೆ ಅವರು ಅಸಲಿ ಪ್ರಯಾಣಿಕರಾಗಿ ಉಳಿಯುವುದಿಲ್ಲʼ ಎಂದು ರೈಲ್ವೆ ಪರಿಹಾರ ನ್ಯಾಯಮಂಡಳಿ ಹೊರಡಿಸಿದ್ದ ಆದೇಶವನ್ನು ಪೀಠ ರದ್ದುಗೊಳಿಸಿತು. ರೈಲು ಅಪಘಾತದಲ್ಲಿ ಸಾವನ್ನಪ್ಪಿದ ಮೃತ ಮನೋಹರ್ ಗಜ್ಭಿಯೆ ಅವರ ಪತ್ನಿ, ಮಗ ಹಾಗೂ ತಾಯಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಿತು. ಮನೋಹರ್‌ ಸಾಮಾನ್ಯ ಪ್ಯಾಸೆಂಜರ್‌ ರೈಲಿನಲ್ಲಿ ರೈಲಿನಲ್ಲಿ ಗೊಂಡಿಯಾದಿಂದ ರೆವ್ರಾಲ್ಗೆ ಪ್ರಯಾಣಿಸಿದ್ದರು.  

ಹಳಿ ದಾಟುತ್ತಿದ್ದಾಗ ಮನೋಹರ್ ಅವರಿಗೆ ರೈೆಲು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದರು. ಬೇರೆ ವ್ಯಕ್ತಿಗಳಿಗೂ ಗಾಯವಾಗಿತ್ತು. ಆದರೂ ಹಳಿ ದಾಟುತ್ತಿದ್ದ ಪ್ರಯಾಣಿಕರ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದ್ದು ರೈಲ್ವೆ ಕಾಯಿದೆಯಡಿ ಪರಿಹಾರ ಒದಗಿಸಲಾಗದು ಎಂದು ರೈಲ್ವೆ ಪರಿಹಾರ ನ್ಯಾಯಮಂಡಳಿ ಆದೇಶ ನೀಡಿತ್ತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT