ಬೆಂಗಳೂರು-ಮೈಸೂರು ಹತ್ತು ಪಥದ ಹೆದ್ದಾರಿ ಕಾಮಗಾರಿ 
ದೇಶ

ಕಳಪೆ ರಸ್ತೆ ಕಾಮಗಾರಿಗಳಿಂದಾಗುವ ಅಪಘಾತಗಳಿಗೆ ಅಧಿಕಾರಿಗಳೇ ಹೊಣೆ: ಹೆದ್ದಾರಿ ಪ್ರಾಧಿಕಾರ

ಕಳಪೆ ರಸ್ತೆ ಕಾಮಗಾರಿಗಳಿಂದಾಗಿ ಸಂಭವಿಸುವ ಯಾವುದೇ ಮಾರಣಾಂತಿಕ ಅಥವಾ ಗಂಭೀರ ಅಪಘಾತಗಳಿಗೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ...

ನವದೆಹಲಿ: ಕಳಪೆ ರಸ್ತೆ ಕಾಮಗಾರಿಗಳಿಂದಾಗಿ ಸಂಭವಿಸುವ ಯಾವುದೇ ಮಾರಣಾಂತಿಕ ಅಥವಾ ಗಂಭೀರ ಅಪಘಾತಗಳಿಗೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ಮಂಗಳವಾರ ಸುತ್ತೋಲೆ ಹೊರಡಿಸಿದೆ.

ತಾತ್ಕಾಲಿಕ ಪ್ರಮಾಣಪತ್ರ ನೀಡುವ ಪ್ರಕ್ರಿಯೆಯಲ್ಲಿ ತೊಡಗಿರುವ ಎನ್ಎಚ್ಎಐ/ಐಇ/ಎಇಯ ಪ್ರತಿನಿಧಿಗಳಿಂದ ಕರ್ತವ್ಯ ಲೋಪವಾದರೆ. ಅವರ ನಿರ್ಲಕ್ಷ್ಯದಿಂದ ಬಳಕೆದಾರರ ಸುರಕ್ಷತೆಗೆ ಧಕ್ಕೆಯಾದರೆ ಅದನ್ನು ಪ್ರಾಧಿಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

“ಆದಾಗ್ಯೂ, ರಸ್ತೆ ಗುರುತು, ರಸ್ತೆ ಸಂಕೇತಗಳು, ಕ್ರಾಶ್ ಬ್ಯಾರಿಯರ್‌ ಹಾಕಿರುವುದನ್ನೇ ಆಧಾರವಾಗಿಟ್ಟುಕೊಂಡು ಕಾಮಗಾರಿ ಪೂರ್ಣಗೊಳಿಸಿರುವ ಕುರಿತು ತಾತ್ಕಾಲಿಕ ಪ್ರಮಾಣಪತ್ರಗಳನ್ನು ನೀಡಲಾಗುತ್ತಿರುವುದು ಪ್ರಾಧಿಕಾರದ ಗಮನಕ್ಕೆ ಬಂದಿದೆ. ಇದು ಬಳಕೆದಾರರ ಸುರಕ್ಷತೆ ಬಗ್ಗೆ ರಾಜಿ ಮಾಡಿಕೊಂಡಂತೆ ಮತ್ತು ಇದರಿಂದ ಪ್ರಾಧಿಕಾರಕ್ಕೂ ಕೆಟ್ಟ ಹೆಸರು ಬರುತ್ತದೆ" ಎಂದು ಸುತ್ತೋಲೆ ಹೇಳಿದೆ.

"ತಾತ್ಕಾಲಿಕ ಪ್ರಮಾಣಪತ್ರವನ್ನು ನೀಡುವ ಮೊದಲು ಯೋಜನಾ ಹೆದ್ದಾರಿಯಲ್ಲಿನ ರಸ್ತೆ ಸುರಕ್ಷತಾ ಕಾಮಗಾರಿಗಳು ಎಲ್ಲಾ ರೀತಿಯಲ್ಲೂ ಪೂರ್ಣಗೊಂಡಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಕಳಪೆ ರಸ್ತೆ ಕಾಮಗಾರಿಯಿಂದಾಗಿ ಸಂಭವಿಸುವ ಯಾವುದೇ ಮಾರಣಾಂತಿಕ / ಗಂಭೀರ ಅಪಘಾತಗಳಿಗೆ ಪ್ರಾದೇಶಿಕ ಅಧಿಕಾರಿಗಳು/ ಯೋಜನಾ ನಿರ್ದೇಶಕರು/ ಸಂಬಂಧಪಟ್ಟ ಇಂಜಿನಿಯರ್ ಅನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ”ಎಂದು ಎನ್ಎಚ್ಎಐ ಎಚ್ಚರಿಕೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT