ಸನ್ನಾ ಇರ್ಷಾದ್ ಮಟ್ಟೂ 
ದೇಶ

ಅಮೆರಿಕಕ್ಕೆ ತೆರಳದಂತೆ ಕಾಶ್ಮೀರಿ ಪತ್ರಕರ್ತೆಯನ್ನು ವಿಮಾನ ನಿಲ್ದಾಣದಲ್ಲಿ ತಡೆದ ಅಧಿಕಾರಿಗಳು

ಪುಲಿಟ್ಜರ್ ಪ್ರಶಸ್ತಿ ವಿಜೇತ ಕಾಶ್ಮೀರಿ ಫೋಟೋ ಜರ್ನಲಿಸ್ಟ್ ಸನ್ನಾ ಇರ್ಷಾದ್ ಮಟ್ಟೂ ಅಮೆರಿಕಕ್ಕೆ ತೆರಳದಂತೆ ದೆಹಲಿ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ತಡೆದಿದ್ದಾರೆ.

ನವದೆಹಲಿ: ಪುಲಿಟ್ಜರ್ ಪ್ರಶಸ್ತಿ ವಿಜೇತ ಕಾಶ್ಮೀರಿ ಫೋಟೋ ಜರ್ನಲಿಸ್ಟ್ ಸನ್ನಾ ಇರ್ಷಾದ್ ಮಟ್ಟೂ ಅಮೆರಿಕಕ್ಕೆ ತೆರಳದಂತೆ ದೆಹಲಿ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ತಡೆದಿದ್ದಾರೆ.

ಮಾನ್ಯತೆಗೊಂಡ ವೀಸಾ ಮತ್ತು ಟಿಕೆಟ್ ಹೊಂದಿದ್ದರೂ ಅಮೆರಿಕಕ್ಕೆ ತೆರಳದಂತೆ ಅಧಿಕಾರಿಗಳು ತಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕೋವಿಡ್ ಸಾಂಕ್ರಾಮಿಕ ಕುರಿತು ರಾಯಿಟರ್ಸ್ ನಲ್ಲಿನ 28 ವರ್ಷದ ಫೋಟೋ ಜರ್ನಲಿಸ್ಟ್ ಸೋಮವಾರ ಪುಲಿಟ್ಜರ್ ಪ್ರಶಸ್ತಿ ಪಡೆಯಲು ನ್ಯೂಯಾರ್ಕ್‌ ಗೆ ತೆರಳಲು ನಿರ್ಧರಿಸಿದ್ದರು. 

'ನ್ಯೂಯಾರ್ಕ್‌ನಲ್ಲಿ ಪುಲಿಟ್ಜರ್ ಪ್ರಶಸ್ತಿಯನ್ನು ಸ್ವೀಕರಿಸಲು ಹೊರಟಿದ್ದೆ ಆದರೆ ದೆಹಲಿ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ತಡೆದರು.  ಮಾನ್ಯವಾದ ಯುಎಸ್ ವೀಸಾ ಮತ್ತು ಟಿಕೆಟ್ ಹೊಂದಿದ್ದರೂ ಅಂತಾರಾಷ್ಟ್ರೀಯ ಪ್ರಯಾಣವನ್ನು ನಿರ್ಬಂಧಿಸಲಾಯಿತು ಎಂದು ಮಟ್ಟೂ ಮಂಗಳವಾರ ಟ್ವೀಟ್ ಮಾಡಿದ್ದಾರೆ.

ಕಳೆದ ನಾಲ್ಕು ತಿಂಗಳಲ್ಲಿ ಎರಡನೇ ಬಾರಿಗೆ ವಿದೇಶ ಪ್ರವಾಸವನ್ನು ನಿರ್ಬಂಧಿಸಲಾಗಿದೆ. ಕಾರಣವಿಲ್ಲದೆ ನನ್ನನ್ನು ವಿದೇಶಕ್ಕೆ ತೆರಳದಂತೆ ತಡೆಯಲಾಗಿದೆ.ಇದರಿಂದಾಗಿ ಜೀವನದಲ್ಲಿ ನನಗೆ ಒಮ್ಮೆ ಸಿಕ್ಕಿದ ಪ್ರಶಸ್ತಿ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸದಂತಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT