ಪವನ್ ಕಲ್ಯಾಣ್ 
ದೇಶ

ವೈಎಸ್ ಆರ್ ಸಿಪಿಗೆ ಎಚ್ಚರಿಕೆ ನೀಡಲು ವೇದಿಕೆ ಮೇಲೆ ಚಪ್ಪಲಿ ತೋರಿಸಿದ ಜನಸೇನಾ ನಾಯಕ ಪವನ್ ಕಲ್ಯಾಣ್

ಆಂಧ್ರಪ್ರದೇಶದಲ್ಲಿ ಅಧಿಕಾರದಲ್ಲಿರುವ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿರುವ ಜನಸೇನಾ ಪಕ್ಷದ ನಾಯಕ, ನಟ ಪವನ್ ಕಲ್ಯಾಣ್, ಯಾರಾದರೂ ತಮ್ಮನ್ನು ಪ್ಯಾಕೇಜ್ ಸ್ಟಾರ್ ಎಂದು ಹೇಳಿದರೆ, ಅವರಿಗೆ ತಮ್ಮ ಚಪ್ಪಲಿಯಿಂದ ಥಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. 

ಆಂಧ್ರಪ್ರದೇಶ: ಆಂಧ್ರಪ್ರದೇಶದಲ್ಲಿ ಅಧಿಕಾರದಲ್ಲಿರುವ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿರುವ ಜನಸೇನಾ ಪಕ್ಷದ ನಾಯಕ, ನಟ ಪವನ್ ಕಲ್ಯಾಣ್, ಯಾರಾದರೂ ತಮ್ಮನ್ನು ಪ್ಯಾಕೇಜ್ ಸ್ಟಾರ್ ಎಂದು ಹೇಳಿದರೆ, ಅವರಿಗೆ ತಮ್ಮ ಚಪ್ಪಲಿಯಿಂದ ಥಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. 

ಮಂಗಳಗಿರಿಯಲ್ಲಿ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ವೇಳೆ ಪವನ್ ಕಲ್ಯಾಣ್ ವೇದಿಕೆ ಮೇಲೆ ಚಪ್ಪಲಿ ತೋರಿಸಿ ಗಂಭೀರ ಪರಿಣಾಮಗಳ ಬಗ್ಗೆ ಎಚ್ಚರಿಸಿದ್ದಾರೆ.

ತಮ್ಮನ್ನು ಟಾರ್ಗೆಟ್ ಮಾಡುತ್ತಿರುವ ವೈಎಸ್ ಆರ್ ಪಿ ನಾಯಕರಿಗೆ ಪವನ್ ಕಲ್ಯಾಣ್ ಎಚ್ಚರಿಕೆ ನೀಡಿದ್ದಾರೆ, ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಸೇರಿದಂತೆ ಆಡಳಿತ ಪಕ್ಷದ ಕೆಲವು ನಾಯಕರು ತಮ್ಮನ್ನು ಬಿಜೆಪಿ, ಟಿಡಿಪಿಯಂತಹ ಪಕ್ಷಗಳಿಂದ ಪ್ಯಾಕೇಜ್ ಪಡೆಯುವ ಪ್ಯಾಕೇಜ್ ಸ್ಟಾರ್ ಎಂದು ಹೇಳುತ್ತಿರುವುದಾಗಿ ಪವನ್ ಕಲ್ಯಾಣ್ ಆರೋಪಿಸಿದ್ದಾರೆ. 

ನೇರವಾಗಿ ತಮ್ಮನ್ನು ಎದುರಿಸುವಂತೆ ಪವನ್ ಕಲ್ಯಾಣ್ ಆಡಳಿತಪಕ್ಷದ ನಾಯಕರಿಗೆ ಸವಾಲು ಹಾಕಿದ್ದು, ಆಧಾರ ರಹಿತ ಆರೋಪಗಳು ತಮ್ಮ ವಿರುದ್ಧ ಕೇಳಿಬಂದರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT