ಸಾಂದರ್ಭಿಕ ಚಿತ್ರ 
ದೇಶ

ಬಿಹಾರ: ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಮಗ ಸತ್ತೇ ಹೋದ ಎಂದು ನಕಲಿ ಮರಣ ಪ್ರಮಾಣಪತ್ರ ಸಲ್ಲಿಸಿದ ತಂದೆ!

ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ನಂತರ ಬಂಧನದಿಂದ ತಪ್ಪಿಸಿಕೊಳ್ಳಲು ತನ್ನ ತಂದೆಯ ನೆರವಿನಿಂದ ಸುಮಾರು ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಿಕ್ಷಕನನ್ನು ಕೊನೆಗೂ ಪೊಲೀಸರು ಬಂಧಿಸಲುವಲ್ಲಿ...

ಪಾಟ್ನಾ: ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ನಂತರ ಬಂಧನದಿಂದ ತಪ್ಪಿಸಿಕೊಳ್ಳಲು ತನ್ನ ತಂದೆಯ ನೆರವಿನಿಂದ ಸುಮಾರು ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಿಕ್ಷಕನನ್ನು ಕೊನೆಗೂ ಪೊಲೀಸರು ಬಂಧಿಸಲುವಲ್ಲಿ ಯಶಸ್ವಿಯಾಗಿರುವ ಘಟನೆ ಬಿಹಾರದ ಭಾಗಲ್ಪುರ್ ಜಿಲ್ಲೆಯಲ್ಲಿ ನಡೆದಿದೆ. 

ಶಿಕ್ಷಕ 'ಸಾವಿನ ನಾಟಕ'ವಾಡಿದ್ದು, ಮಗ ಹೇಳಿದಂತೆ ತಂದೆ ನಡೆದುಕೊಂಡಿದ್ದಾನೆ. ತಂದೆ ಮಗನ ಅಂತ್ಯಸಂಸ್ಕಾರ ಮಾಡುತ್ತಿರುವ ಫೋಟೋವನ್ನು ತೆಗೆದಿದ್ದಾರೆ. 

ನಂತರ, ಶವವನ್ನು ಸುಡಲು ಕಟ್ಟಿಗೆ ಖರೀದಿಸಲು ನೀಡಿದ ಹಣದ ರಸೀದಿಯೊಂದಿಗೆ ತಂದೆ ಪಂಚಾಯತ್ ಕಾರ್ಯದರ್ಶಿಯಿಂದ ತನ್ನ ‘ಜೀವಂತ’ ಮಗನ ಮರಣ ಪ್ರಮಾಣಪತ್ರವನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾನೆ. 

ಬಳಿಕ ತನ್ನ 'ಜೀವಂತ' ಮಗನ ಮರಣ ಪ್ರಮಾಣಪತ್ರ ಮತ್ತು ಅಂತ್ಯಕ್ರಿಯೆಯ ಛಾಯಾಚಿತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಮೂಲಕ ಅತ್ಯಾಚಾರ ಆರೋಪಿ 'ಇನ್ನಿಲ್ಲ' ಎಂದು ಪ್ರಕರಣವನ್ನು ಮುಚ್ಚಿ ಹಾಕಿದ್ದರು.

ಆದರೆ ಆರೋಪಿ ಶಿಕ್ಷಕ ನೀರಜ್ ಮೋದಿ ಅವರ 'ಸಾವು' ನಕಲಿ ಎಂದು ಕಂಡುಬಂದ ನಂತರ ಭಾಗಲ್ಪುರದ ವಿಶೇಷ ಪೋಕ್ಸೊ ನ್ಯಾಯಾಲಯಕ್ಕೆ ಸೋಮವಾರ ಶರಣಾಗಿದ್ದಾನೆ. ನ್ಯಾಯಾಲಯ ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

2018 ರ ಅಕ್ಟೋಬರ್ 14 ರಂದು ಇಶಿಪುರ್ ಬರಾಹತ್ ಪೊಲೀಸ್ ಠಾಣೆಯ ನಿವಾಸಿಯಾದ ಶಿಕ್ಷಕನ ವಿರುದ್ಧ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ್ದಕ್ಕಾಗಿ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ ಬಂಧನದಿಂದ ತಪ್ಪಿಸಿಕೊಳ್ಳಲು ಶಿಕ್ಷಕ ತಾನು ಸತ್ತಿರುವುದಾಗಿ ತಂದೆಯ ಮೂಲಕ ನಂಬಿಸಿದ್ದ. ಆರೋಪಿ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ತಂದೆ ರಾಜಾರಾಮ್ ಮೋದಿ ಅವರನ್ನು ಬಂಧಿಸಲಾಗಿದೆ.

ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಆರೋಪಿ ಶಿಕ್ಷಕ ಇನ್ನೂ ಬದುಕಿರುವುದು ತನ್ನ ಪರಿಚಯಸ್ಥರ ಮೂಲಕ ತಿಳಿಯುತ್ತಿದ್ದಂತೆಯೇ ಶಿಕ್ಷಕನ ನಕಲಿ ಸಾವಿನ ಹಿಂದಿನ ಸಂಚು ಬಯಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ