ದೇಶ

ನದಿಯಲ್ಲಿ ಮುಳುಗುತ್ತಿದ್ದ ತನ್ನಿಬ್ಬರು ಮಕ್ಕಳನ್ನು ರಕ್ಷಿಸಿದ ನಂತರ ತಾನೇ ನೀರುಪಾಲಾದ ಪೊಲೀಸ್ ಸಿಬ್ಬಂದಿ

Ramyashree GN

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ನದಿಯಲ್ಲಿ ಮುಳುಗುತ್ತಿದ್ದ ತನ್ನ ಇಬ್ಬರು ಮಕ್ಕಳನ್ನು ರಕ್ಷಿಸಿದ ಪೊಲೀಸ್ ಸಿಬ್ಬಂದಿಯೊಬ್ಬರು ಬುಧವಾರ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಸ್ರೋಟಾ ಪ್ರದೇಶದಲ್ಲಿ ಸ್ನಾನ ಮಾಡುತ್ತಿದ್ದಾಗ ಇಬ್ಬರು ಮಕ್ಕಳು ಉಜ್ ನದಿಗೆ ಜಾರಿದ್ದಾರೆ. ಅವರು ಮುಳುಗುತ್ತಿರುವುದನ್ನು ಕಂಡ ತಂದೆ ಶೇಶಿಪಾಲ್ ಸಿಂಗ್ ಅವರು ನದಿಗೆ ಹಾರಿ ಅವರನ್ನು ರಕ್ಷಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಆದರೆ ನದಿಯ ಬಲವಾದ ಪ್ರವಾಹದಿಂದಾಗಿ ಅವರು ತನ್ನನ್ನು ತಾನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳೀಯರು ಮತ್ತು ಪೊಲೀಸರು ಆತನನ್ನು ನದಿಯಿಂದ ಹೊರತೆಗೆದು ಕಥುವಾ ಆಸ್ಪತ್ರೆಗೆ ಸಾಗಿಸಿದರಾದರೂ, ಅಷ್ಟೊತ್ತಿಗಾಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ಅವರು ಹೇಳಿದರು.

ಸಿಂಗ್ ಅವರನ್ನು ದೋಡಾದಲ್ಲಿ ನಿಯೋಜಿಸಲಾಗಿದ್ದು, ಕಳೆದ ಕೆಲವು ದಿನಗಳಿಂದ ರಜೆಯಲ್ಲಿದ್ದರು.

SCROLL FOR NEXT