ಶಶಿ ತರೂರ್ 
ದೇಶ

ಎರಡು ಮುಖ: ತರೂರ್ ವಿರುದ್ಧ ಕಾಂಗ್ರೆಸ್ ಚುನಾವಣಾ ಮುಖ್ಯಸ್ಥ ಮಿಸ್ತ್ರಿ ವಾಗ್ದಾಳಿ!

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಪಕ್ಷಪಾತ ಮತ್ತು ಅಕ್ರಮದ ಆರೋಪ ಮಾಡಿದ್ದ ಶಶಿ ತರೂರ್ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ಚುನಾವಣಾ ಮುಖ್ಯಸ್ಥ ಮಧುಸೂದನ್ ಮಿಸ್ತ್ರಿ ಅವರು 2 ಮುಖ ಎಂದು ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಪಕ್ಷಪಾತ ಮತ್ತು ಅಕ್ರಮದ ಆರೋಪ ಮಾಡಿದ್ದ ಶಶಿ ತರೂರ್ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ಚುನಾವಣಾ ಮುಖ್ಯಸ್ಥ ಮಧುಸೂದನ್ ಮಿಸ್ತ್ರಿ ಅವರು ಎರಡು ಮುಖ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾದ ಬಳಿಕ ಅವರ ಪ್ರತಿಸ್ಪರ್ಧಿಯಾಗಿದ್ದ ಶಶಿ ತರೂರ್ ಮತ್ತು ಅವರ ಬೆಂಬಲಿತ ನಾಯಕರು ಚುನಾವಣೆಯನ್ನು ಏಕಪಕ್ಷೀಯ ಮತ್ತು ಅಕ್ರಮ ನಡೆದಿದೆ ಎಂದು ಆರೋಪಿಸಿದ್ದರು.

ಚುನಾವಣಾ ಮುಖ್ಯಸ್ಥರು ಪಕ್ಷಪಾತ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಪ್ರತಿಕ್ರಿಯೆ ನೀಡಿರುವ ಮಿಸ್ತ್ರಿ ಅವರು, 'ನಾವು ನಿಮ್ಮ ಮನವಿಗೆ ಮನ್ನಣೆ ನೀಡಿದ್ದೇವೆ ಮತ್ತು ಅದರ ಹೊರತಾಗಿಯೂ ನೀವು ಕೇಂದ್ರ ಚುನಾವಣಾ ಪ್ರಾಧಿಕಾರವು ನಿಮ್ಮ ವಿರುದ್ಧ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿ ಮಾಧ್ಯಮಗಳಿಗೆ ಹೋಗಿದ್ದೀರಿ. ನಮ್ಮೆಲ್ಲರ ಉತ್ತರಗಳಿಂದ ನೀವು ತೃಪ್ತರಾಗಿದ್ದೀರಿ.. ಹೀಗಿದ್ದೂ ಮಾಧ್ಯಮಗಳ ಮುಂದೆ ನೀವಾಡಿರುವ ಮಾತುಗಳು ನಿಮ್ಮ ಮತ್ತೊಂದು ಮುಖದ ಅನಾವರಣ ಮಾಡಿದೆ ಎಂದು ಕಿಡಿಕಾರಿದ್ದಾರೆ.

ನಮ್ಮೊಂದಿಗೆ ಸಂವಹನ ಮಾಡುವಾಗ ಒಂದು ಮುಖವಿದ್ದರೆ ಮಾಧ್ಯಮಗಳ ಮುಂದೆ ಮಾತನಾಡುವಾಗ ಮತ್ತೊಂದು ಮುಖವಿತ್ತು ಎಂದು ಹೇಳಲು ನಾನು ವಿಷಾದಿಸುತ್ತೇನೆ ಎಂದು ತರೂರ್ ಅವರ ಮುಖ್ಯ ಚುನಾವಣಾ ಏಜೆಂಟ್ ಸಲ್ಮಾನ್ ಸೋಜ್‌ಗೆ ಮಿಸ್ತ್ರಿ ಹೇಳಿದರು.

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಬುಧವಾರ ನಡೆಯುತ್ತಿದ್ದಂತೆ, ಅಭ್ಯರ್ಥಿ ಶಶಿ ತರೂರ್ ಅವರ ತಂಡವು ಪಕ್ಷದ ಮುಖ್ಯ ಚುನಾವಣಾ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದು, ಉತ್ತರ ಪ್ರದೇಶದ ಚುನಾವಣೆಯ ನಿರ್ವಹಣೆಯಲ್ಲಿ 'ಅತ್ಯಂತ ಗಂಭೀರ ಅಕ್ರಮಗಳಾಗಿವೆ ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT