ಸಾಂದರ್ಭಿಕ ಚಿತ್ರ 
ದೇಶ

ಕೇದಾರನಾಥ್ ಗೆ ಹೆಲಿಕಾಪ್ಟರ್ ಸೇವೆ ಪುನರ್ ಆರಂಭ

ಹೆಲಿಕಾಪ್ಟರ್ ದುರಂತ ಸಂಭವಿಸಿದ ಎರಡು ದಿನಗಳ ಬಳಿಕ ಉತ್ತರಾಖಂಡ್ ನ ಪ್ರಸಿದ್ಧ ಯಾತ್ರಾ ಸ್ಥಳ ಕೇದಾರನಾಥ್ ದೇವಾಲಯಕ್ಕೆ ಹೆಲಿಕಾಪ್ಟರ್ ಸೇವೆ ಪುನರ್ ಆರಂಭವಾಗಿದೆ. ಮಂಗಳವಾರ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಪೈಲಟ್ ಹಾಗೂ ಆರು ಮಂದಿ ಭಕ್ತರು ಸಾವನ್ನಪ್ಪಿದ್ದರು.  

ಡೆಹ್ರಾಡೂನ್: ಹೆಲಿಕಾಪ್ಟರ್ ದುರಂತ ಸಂಭವಿಸಿದ ಎರಡು ದಿನಗಳ ಬಳಿಕ ಉತ್ತರಾಖಂಡ್ ನ ಪ್ರಸಿದ್ಧ ಯಾತ್ರಾ ಸ್ಥಳ ಕೇದಾರನಾಥ್ ದೇವಾಲಯಕ್ಕೆ ಹೆಲಿಕಾಪ್ಟರ್ ಸೇವೆ ಪುನರ್ ಆರಂಭವಾಗಿದೆ. ಮಂಗಳವಾರ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಪೈಲಟ್ ಹಾಗೂ ಆರು ಮಂದಿ ಭಕ್ತರು ಸಾವನ್ನಪ್ಪಿದ್ದರು.  

ಬುಧವಾರ ವಿವಿಧ ವಿಮಾನಯಾನ ಕಂಪನಿಗಳು ಹೆಲಿಕಾಪ್ಟರ್ ಸೇವೆಯನ್ನು ಪುನರ್ ಆರಂಭಿಸಿದ್ದು, 981 ಭಕ್ತರನ್ನು ಕೇದಾರನಾಥ್ ಗೆ ಕರೆದೊಯ್ಯಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅರ್ಯನ್ ವಿಮಾನಯಾನ ಕಂಪನಿ ಮಸ್ತ- ಗುಪ್ತ್ ಕಾಶಿಯಿಂದ ಕೇದಾರನಾಥ್ ಗೆ ಸೇವೆಯನ್ನು ಪುನರ್ ಆರಂಭಿಸಿದೆ.

ನಾಗರಿಕ ವಿಮಾನಯಾನ ನಿರ್ದೇಶನಾಲಯದ ತಂಡವೊಂದು  ಮಸ್ತ ಹೆಲಿಪ್ಯಾಡ್ ನಲ್ಲಿ ಪರಿಶೀಲನೆ ನಡೆಸಿದ ನಂತರ ಹೆಲಿಕಾಪ್ಟರ್ ಸೇವೆಯನ್ನು ಪುನರ್ ಆರಂಭಿಸಲಾಯಿತು ಎಂದು ಆರ್ಯನ್ ವಿಮಾನಯಾನದ ಅಧಿಕಾರಿ ಗುರುವಾರ  ತಿಳಿಸಿದ್ದಾರೆ. ಪ್ರಸ್ತುತ ಕೇದಾರನಾಥ್ ಗೆ ಎಂಟು ಕಂಪನಿಗಳು ಹೆಲಿಕಾಪ್ಟರ್ ಸೇವೆಯನ್ನು ಒದಗಿಸುತ್ತಿವೆ.

ಈ ವರ್ಷದ ಮೇ ತಿಂಗಳಿನಿಂದ ಕೇದಾರನಾಥ ದೇವಾಲಯದ ಬಾಗಿಲು ತೆರೆದ ನಂತರ 1,44,832 ಯಾತ್ರಾರ್ಥಿಗಳು ಹೆಲಿಕಾಪ್ಟರ್ ಮೂಲಕ ದೇವಾಲಯಕ್ಕೆ ಪ್ರಯಾಣಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಳಗ್ಗೆ ದೇವಾಲಯಕ್ಕೆ ತೆರಳಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT