ದೇಶ

ಉತ್ತರ ಪ್ರದೇಶ: ಶಾಲೆಯಿಂದ ಮನೆಗೆ ಮರಳುತ್ತಿದ್ದ ವೇಳೆ ಮಣ್ಣಿನ ಗುಡ್ಡ ಕುಸಿದು ಮೂವರು ಮಕ್ಕಳು ಸಾವು

Ramyashree GN

ಲಖನೌ: ಇಲ್ಲಿನ ಫಕೀರಪುರ ಗ್ರಾಮದಲ್ಲಿ ಮಣ್ಣಿನ ಗುಡ್ಡ ಕುಸಿದು ಮೂವರು ಮಕ್ಕಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬುಧವಾರ ಮಕ್ಕಳು ಶಾಲೆಯಿಂದ ತಮ್ಮ ಮನೆಗೆ ಮರಳುವಾಗ ಗುಡ್ಡದ ಮೂಲಕ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಮೃತರನ್ನು ಸಚಿನ್ (12), ಗೋವಿಂದ್ (13), ಕೌಶಲ್ (13) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಜೆಯಾದರೂ ಮಕ್ಕಳು ಮನೆಗೆ ಬಾರದೇ ಇದ್ದುದರಿಂದ ಅವರ ಮನೆಯವರು ಹುಡುಕಾಟ ನಡೆಸಿದಾಗ ಮೂವರೂ ಮಣ್ಣಿನಲ್ಲಿ ಹೂತು ಹೋಗಿರುವುದು ಕಂಡು ಬಂದಿದೆ.

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

SCROLL FOR NEXT