ಸೇನಾ ಹೆಲಿಕಾಪ್ಟರ್ ಪತನ 
ದೇಶ

ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ: ಇಬ್ಬರ ಸಾವು, ಮುಂದುವರಿದ ಕಾರ್ಯಾಚರಣೆ

ಅರುಣಾಚಲ ಪ್ರದೇಶದ ಪರ್ವತ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಸೇನಾ ಹೆಲಿಕಾಪ್ಟರ್ ಪತನಗೊಂಡಿದ್ದು, ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಗುವಾಹಟಿ: ಅರುಣಾಚಲ ಪ್ರದೇಶದ ಪರ್ವತ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಸೇನಾ ಹೆಲಿಕಾಪ್ಟರ್ ಪತನಗೊಂಡಿದ್ದು, ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯ ಟುಟಿಂಗ್ ಬಳಿಯ ಮಿಗ್ಗಿಂಗ್ ನಲ್ಲಿ ಬೆಳಗ್ಗೆ 10:43 ಸುಮಾರಿನಲ್ಲಿ ಈ ಘಟನೆ ಸಂಭವಿಸಿದ್ದು, ಕಾಪ್ಟರ್ ನಲ್ಲಿದ್ದ ಮೂವರ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ದುರಂತದಲ್ಲಿ ಮತ್ತೋರ್ವ ಸಿಲುಕಿರುವ ಶಂಕೆ ಇದ್ದು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಸೇನೆಯ ಸುಧಾರಿತ ಲಘು ಹೆಲಿಕಾಪ್ಟರ್ (ALH) ಇಂದು ಬೆಳಿಗ್ಗೆ 10:40 ರ ಸುಮಾರಿಗೆ ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯ ಟ್ಯೂಟಿಂಗ್ ಪ್ರದೇಶದ ಬಳಿ ಪತನಗೊಂಡಿತ್ತು. ಪ್ರಾಥಮಿಕ ವರದಿಗಳ ಅನ್ವಯ ದುರಂತ ಸಂಭವಿಸದ ವೇಳೆ ಕಾಪ್ಟರ್ ನಲ್ಲಿ ಪೈಲಟ್ ಸೇರಿದಂತೆ ಮೂವರು ಇದ್ದರು ಎನ್ನಲಾಗಿದೆ. ಕಾಪ್ಟರ್ ಪತನವಾದ ವಿಡಿಯೋವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಈ ವಿಡಿಯೋ ವೈರಲ್ ಆಗುತ್ತಿದೆ. ಕಾಪ್ಟರ್ ಪತನವಾಗುತ್ತಿದ್ದಂತೆಯೇ ಪರ್ವತದಿಂದ ಬೆಂಕಿ ಮಿಶ್ರಿತ ದಟ್ಟ ಹೊಗೆ ಏರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಜುಮ್ಮರ್ ಬಸಾರ್, ಪೊಲೀಸ್ ವರಿಷ್ಠಾಧಿಕಾರಿ ಅಪ್ಪರ್ ಸಿಯಾಂಗ್ ಅವರು ದೂರವಾಣಿ ಮೂಲಕ ಈ ಕುರಿತು ಮಾತನಾಡಿದ್ದು, "ಅಪಘಾತದ ಸ್ಥಳವನ್ನು ರಸ್ತೆಯ ಮೂಲಕ ಸಂಪರ್ಕಿಸಲಾಗಿಲ್ಲ. ರಕ್ಷಣಾ ತಂಡಗಳು ಘಟನಾ ಪ್ರದೇಶಕ್ಕೆ ಧಾವಿಸುತ್ತಿದ್ದು, ಇತರ ಎಲ್ಲಾ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ ಅಕ್ಟೋಬರ್ 5 ರಂದು ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದ ಬಳಿ ಚೀತಾ ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತೀಯ ಸೇನಾ ಪೈಲಟ್ ಗಳು ಪ್ರಾಣ ಕಳೆದುಕೊಂಡಿದ್ದರು. ತವಾಂಗ್ ಬಳಿಯ ಫಾರ್ವರ್ಡ್ ಪ್ರದೇಶಗಳಲ್ಲಿ ಹಾರುತ್ತಿದ್ದ ಚೀತಾ ಹೆಲಿಕಾಪ್ಟರ್ ಬೆಳಗ್ಗೆ 10 ಗಂಟೆ ಸುಮಾರಿನಲ್ಲಿ ದಿನನಿತ್ಯದ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಅಪಘಾತಕ್ಕೀಡಾಗಿತ್ತು. ಘಟನೆಯಲ್ಲಿ ಗಾಯಗೊಂಡ ಇಬ್ಬರೂ ಪೈಲಟ್‌ಗಳನ್ನು ಹತ್ತಿರದ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

SCROLL FOR NEXT