ಸೇನಾ ಹೆಲಿಕಾಪ್ಟರ್ ಪತನ 
ದೇಶ

ಅರುಣಾಚಲದಲ್ಲಿ ಹೆಲಿಕಾಪ್ಟರ್ ಪತನ: 5ನೇ ಸೇನಾ ಸಿಬ್ಬಂದಿಯ ಮೃತದೇಹ ಪತ್ತೆ

ಅರುಣಾಚಲ ಪ್ರದೇಶದ ಪರ್ವತ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಪತನಗೊಂಡಿದ್ದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ನಾಪತ್ತೆಯಾಗಿದ್ದ ಮತ್ತೊಬ್ಬ ಸಿಬ್ಬಂದಿಯ ಮೃತದೇಹ ಶನಿವಾರ ಪತ್ತೆಯಾಗಿದ್ದು, ಇದರೊಂದಿಗೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ...

ಗುವಾಹಟಿ: ಅರುಣಾಚಲ ಪ್ರದೇಶದ ಪರ್ವತ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಪತನಗೊಂಡಿದ್ದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ನಾಪತ್ತೆಯಾಗಿದ್ದ ಮತ್ತೊಬ್ಬ ಸಿಬ್ಬಂದಿಯ ಮೃತದೇಹ ಶನಿವಾರ ಪತ್ತೆಯಾಗಿದ್ದು, ಇದರೊಂದಿಗೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಇಬ್ಬರು ಪೈಲಟ್‌ಗಳು ಸೇರಿದಂತೆ ಐವರು ಸೇನಾ ಸಿಬ್ಬಂದಿಯನ್ನು ಹೊತ್ತ ಸುಧಾರಿತ ಲಘು ಹೆಲಿಕಾಪ್ಟರ್ (ಎಎಲ್‌ಹೆಚ್) ನಿಯಮಿತ ಕಾರ್ಯಾಚರಣೆಯಲ್ಲಿದ್ದಾಗ ಶುಕ್ರವಾರ ಬೆಳಗ್ಗೆ 10.43ಕ್ಕೆ ಟ್ಯೂಟಿಂಗ್‌ನಿಂದ ದಕ್ಷಿಣಕ್ಕೆ 25 ಕಿಮೀ ದೂರದಲ್ಲಿರುವ ಮಿಗ್ಗಿಂಗ್ ಬಳಿ ಪತನಗೊಂಡಿತು ಎಂದು ಅವರು ಹೇಳಿದ್ದಾರೆ.

ಚೀನಾದ ಗಡಿಯಿಂದ ಸುಮಾರು 35 ಕಿ.ಮೀ ದೂರದಲ್ಲಿರುವ ದಟ್ಟವಾದ ಕಾಡಿನ ಪರ್ವತ ಪ್ರದೇಶದಲ್ಲಿ ಇತರ ನಾಲ್ವರು ಸಿಬ್ಬಂದಿಯ ಮೃತದೇಹಗಳನ್ನು ಶುಕ್ರವಾರ ಸಂಜೆ ವಶಪಡಿಸಿಕೊಳ್ಳಲಾಗಿತ್ತು ಎಂದು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಎ ಎಸ್ ವಾಲಿಯಾ ತಿಳಿಸಿದ್ದಾರೆ.

ಮೃತ ಸೇನಾ ಸಿಬ್ಬಂದಿಯನ್ನು ಪೈಲಟ್‌ಗಳಾದ ಮೇಜರ್ ವಿಕಾಸ್ ಭಂಭು ಮತ್ತು ಮೇಜರ್ ಮುಸ್ತಫಾ ಬೊಹರಾ, ಸಿಎಫ್‌ಎನ್ ಟೆಕ್ ಎವಿಎನ್(ಎಇಎನ್) ಅಸ್ವಿನ್ ಕೆ ವಿ, ಹವಾಲ್ದಾರ್ (ಒಪಿಆರ್) ಬೀರೇಶ್ ಸಿನ್ಹಾ ಮತ್ತು ಎನ್‌ಕೆ(ಪಿಪಿಆರ್) ರೋಹಿತಾಶ್ವ ಕುಮಾರ್ ಎಂದು ಗುರುತಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT