ನಾರಾಯಣ ರಾಣೆ 
ದೇಶ

ಉದ್ಧವ್ ಬಣದ ಇನ್ನೂ ನಾಲ್ವರು ಶಾಸಕರು ಪಕ್ಷ ಬದಲಾಯಿಸಲಿದ್ದಾರೆ: ಕೇಂದ್ರ ಸಚಿವ ರಾಣೆ

ಶಿವಸೇನೆಯ ಉದ್ಧವ್ ಠಾಕ್ರೆ ಬಣದ ನಾಲ್ವರು ಶಾಸಕರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಪಕ್ಷಕ್ಕೆ ಸೇರಲು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಕೇಂದ್ರ ಸಚಿವ ನಾರಾಯಣ ರಾಣೆ ಅವರು ಶನಿವಾರ ಹೇಳಿದ್ದಾರೆ.

ಪುಣೆ: ಶಿವಸೇನೆಯ ಉದ್ಧವ್ ಠಾಕ್ರೆ ಬಣದ ನಾಲ್ವರು ಶಾಸಕರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಪಕ್ಷಕ್ಕೆ ಸೇರಲು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಕೇಂದ್ರ ಸಚಿವ ನಾರಾಯಣ ರಾಣೆ ಅವರು ಶನಿವಾರ ಹೇಳಿದ್ದಾರೆ. ಆದರೆ ಆ ನಾಲ್ವರು ಶಾಸಕರ ಹೆಸರನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.

ಕೇಂದ್ರ ಸರ್ಕಾರದ 'ರೋಜ್‌ಗಾರ್ ಮೇಳ'ದ ಭಾಗವಾಗಿ ಇಂದು ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಣೆ, "ಶಿವಸೇನೆಯ 56 ಶಾಸಕರ ಪೈಕಿ ಆರರಿಂದ ಏಳು ಶಾಸಕರು ಮಾತ್ರ (ಉದ್ಧವ್ ಠಾಕ್ರೆ ಬಣದಲ್ಲಿ)ಅಲ್ಲಿ ಉಳಿದಿದ್ದಾರೆ. ಅವರೂ ಹೊರಬರುವ ಹಾದಿಯಲ್ಲಿದ್ದಾರೆ. ನಾಲ್ವರು ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಆದರೆ ನಾನು ಅವರ ಹೆಸರನ್ನು ಬಹಿರಂಗಪಡಿಸುವುದಿಲ್ಲ" ಎಂದಿದ್ದಾರೆ.

ಇದೇ ವೇಳೆ ಉದ್ಧ ಠಾಕ್ರೆ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವರು, ಮಾಜಿ ಸಿಎಂ ರಾಜಕೀಯವು ಮಾತೋಶ್ರೀಗೆ ಸೀಮಿತವಾಗಿದೆ(ಮುಂಬೈನ ಬಾಂದ್ರಾದಲ್ಲಿರುವ ಠಾಕ್ರೆಯ ಖಾಸಗಿ ನಿವಾಸ ಮತ್ತು ಸೇನಾ ಭವನ, ಪಕ್ಷದ ಶಕ್ತಿ ಕೇಂದ್ರ). 'ಈಗ ಸೇನೆಯ ಯಾವುದೇ ಬಣ ಉಳಿದಿಲ್ಲ' ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ನಾವು ಕೈ ಜೋಡಿಸೋಣ": ಗಲ್ವಾನ್ ಸಂಘರ್ಷದ ಬಳಿಕ ಮೊದಲ ಮಾತುಕತೆ ವೇಳೆ Narendra Modi ಗೆ Xi Jinping ಸಂದೇಶ; ಭಾರತದೆದುರು ಮಂಡಿಯೂರಿದ ಚೀನಾ?

ಪ್ರಶ್ನೆ ಪತ್ರಿಕೆ ಸೋರಿಕೆ ಸಹಿಸಲ್ಲ: KPSC ವಿರುದ್ಧ ಹೋರಾಟಕ್ಕೆ CJP ಎಂಟ್ರಿ: ನೊಂದ ಅಭ್ಯರ್ಥಿಗಳಿಗೆ ನ್ಯಾಯದ ಭರವಸೆ

ಮೈಸೂರಿನ 'ಪೇಟೆ ರೌಡಿ' ಪೊಲೀಸ್ ಠಾಣೆಗೆ ನುಗ್ಗಿದ್ರೆ ನಾನು ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುತ್ತೇನೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನ್

ಚೀನಾ ಇದ್ದರೂ ಬ್ರಿಕ್ಸ್‌ ಸದಸ್ಯತ್ವಕ್ಕಾಗಿ 3 ವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ರೂ ಅವಕಾಶ ಸಿಕ್ಕಿಲ್ಲ: ಪಾಕ್ ಗೋಳಾಟ!

ಬಳ್ಳಾರಿ ನಂತರ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಪಾದಯಾತ್ರೆ ಘೋಷಿಸಿದ ಬಿಜೆಪಿ; ಸೆ. 15 ರಿಂದ ರಾಜ್ಯಾದ್ಯಂತ ಹೋರಾಟ