ಪ್ರಾತಿನಿಧಿಕ ಚಿತ್ರ 
ದೇಶ

ದೀಪಾವಳಿ ವೇಳೆ ಸಂಚಾರ ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲ್ಲ ಎಂದ ಸರ್ಕಾರ, ಯಾವ ರಾಜ್ಯದಲ್ಲಿ ಈ ನಿಯಮ?

ಈ ವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಜನರಿಗೆ ದಂಡ ವಿಧಿಸಲಾಗುವುದಿಲ್ಲ ಎಂದು ಗುಜರಾತ್ ಸರ್ಕಾರ ಘೋಷಿಸಿದೆ.

ಸೂರತ್: ಈ ವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಜನರಿಗೆ ದಂಡ ವಿಧಿಸಲಾಗುವುದಿಲ್ಲ ಎಂದು ಗುಜರಾತ್ ಸರ್ಕಾರ ಘೋಷಿಸಿದೆ.

ಗುಜರಾತ್ ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘವಿ ಶುಕ್ರವಾರ ಇಲ್ಲಿ ಈ ಘೋಷಣೆ ಮಾಡಿದ್ದಾರೆ.

ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ದೀಪಾವಳಿ ಹಬ್ಬದ ದೃಷ್ಟಿಯಿಂದ ಗುಜರಾತ್‌ನ ಸಂಚಾರ ಪೊಲೀಸರು ಅಕ್ಟೋಬರ್ 27 ರವರೆಗೆ ಟ್ರಾಫಿಕ್ ನಿಯಮ ಉಲ್ಲಂಘಿಸುವವರಿಂದ ಯಾವುದೇ ದಂಡವನ್ನು ಸಂಗ್ರಹಿಸುವುದಿಲ್ಲ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಮಾರ್ಗದರ್ಶನದಂತೆ ರಾಜ್ಯ ಗೃಹ ಇಲಾಖೆಯಿಂದ ದೀಪಾವಳಿ ಸಂದರ್ಭದಲ್ಲಿ ಜನರಿಗೆ ಪರಿಹಾರ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

'ಅಕ್ಟೋಬರ್ 21 ರಿಂದ ಅಕ್ಟೋಬರ್ 27 ರವರೆಗೆ ಗುಜರಾತ್‌ನ ಟ್ರಾಫಿಕ್ ಪೊಲೀಸರು ಜನರಿಂದ ಯಾವುದೇ ದಂಡವನ್ನು ಸಂಗ್ರಹಿಸುವುದಿಲ್ಲ. ಈ ಅವಧಿಯಲ್ಲಿ ಯಾರಾದರೂ ಹೆಲ್ಮೆಟ್ ಅಥವಾ ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಸಿಕ್ಕಿಬಿದ್ದರೆ ಅಥವಾ ಇತರ ಯಾವುದೇ ಸಂಚಾರ ನಿಯಮವನ್ನು ಉಲ್ಲಂಘಿಸಿದರೆ, ನಮ್ಮ ಪೊಲೀಸರು ಅವರಿಗೆ ಹೂವು ನೀಡುತ್ತಾರೆ' ಎಂದು ಸಚಿವರು ಹೇಳಿದರು.

ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತವಿರುವ ಗುಜರಾತ್‌ನಲ್ಲಿ ಡಿಸೆಂಬರ್ ಅಂತ್ಯದೊಳಗೆ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಶುಕ್ರವಾರ ಆಚರಿಸಿದ ಗೋವತ್ಸ ದ್ವಾದಶಿ ಈ ವರ್ಷದ ದೀಪಾವಳಿ ಹಬ್ಬಕ್ಕೆ ನಾಂದಿ ಹಾಡಿತು.

ದೀಪಗಳ ಹಬ್ಬದ ಪ್ರಮುಖ ದಿನವಾದ ಲಕ್ಷ್ಮೀ ಪೂಜೆಯನ್ನು ಅಕ್ಟೋಬರ್ 24 ರಂದು ಆಚರಿಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!

ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!

Passport ಪೌರತ್ವದ ಪ್ರಮಾಣಪತ್ರವಲ್ಲ, Travel document ಅಷ್ಟೇ: MEA ಸ್ಪಷ್ಟನೆ, ಹೊಸ ಚರ್ಚೆಗೆ ನಾಂದಿ..!

ಭೂಕಂಪದ ರೌದ್ರನರ್ತನಕ್ಕೆ Venezuela ತತ್ತರ; Caracasನಲ್ಲಿ ಧರೆಗುರುಳಿದ ಕಟ್ಟಡಗಳು, ಸುನಾಮಿ ಎಚ್ಚರಿಕೆ..!

X ಖಾತೆ ನಿರ್ಬಂಧ ವಿವಾದ: ನಮ್ಮನ್ನು ಭಯೋತ್ಪಾದಕರು ಎನ್ನುತ್ತೀರಾ? ನಾಚಿಕೆಯಾಗುವುದಿಲ್ಲವೇ ನಿಮಗೆ?; ಕೇಂದ್ರದ ವಿರುದ್ಧ Cockroach Janta Party ಕಿಡಿ..!