ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ 
ದೇಶ

ಕೇರಳ: ತಾರಕಕ್ಕೇರಿದ ರಾಜ್ಯಪಾಲ-ಸರ್ಕಾರದ ನಡುವಿನ ತಿಕ್ಕಾಟ, 9 ವಿವಿಗಳ ಉಪಕುಲಪತಿಗಳ ರಾಜೀನಾಮೆ ಕೇಳಿದ ಆರೀಫ್ ಖಾನ್ 

ಕೇರಳ ರಾಜ್ಯದ 9 ವಿವಿಗಳ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ರಾಜ್ಯಪಾಲರು ಸೂಚಿಸಿದ್ದು ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ತಿಕ್ಕಾಟ ತಾರಕಕ್ಕೇರಿದೆ. 

ತಿರುವನಂತಪುರಂ: ಕೇರಳ ರಾಜ್ಯದ 9 ವಿವಿಗಳ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ರಾಜ್ಯಪಾಲರು ಸೂಚಿಸಿದ್ದು ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ತಿಕ್ಕಾಟ ತಾರಕಕ್ಕೇರಿದೆ. 

ಇತ್ತೀಚೆಗೆ ಸುಪ್ರೀಂ ಕೋರ್ಟ್, ಎಪಿಜೆ ಅಬ್ದುಲ್ ಕಲಾಪ್ ತಾಂತ್ರಿಕ ವಿವಿಯ ಉಪಕುಲಪತಿ ನೇಮಕವನ್ನು ಯುಜಿಸಿ ನಿಯಮಗಳಿಗೆ ವಿರುದ್ಧವಾಗಿದೆ ಎಂದು ರದ್ದುಗೊಳಿಸಿತ್ತು. ಈ ಬೆನ್ನಲ್ಲೇ ರಾಜ್ಯಪಾಲರು 9 ವಿವಿಗಳ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ. ಈ ಪೈಕಿ ಎಪಿಜೆ ಅಬ್ದುಲ್ ಕಲಾಮ್ ತಾಂತ್ರಿಕ ವಿವಿಯ ಉಪಕುಲಪತಿಗಳೂ ಇದ್ದಾರೆ ಎಂದು ತಿಳಿದುಬಂದಿದೆ.

ವಿವಿಗಳ ಕುಲಪತಿಗಳೂ ಆಗಿರುವ ರಾಜ್ಯಪಾಲರು ಸೋಮವಾರ ಬೆಳಿಗ್ಗೆ 11.30 ರ ವೇಳೆಗೆ ಉಪಕುಲಪತಿಗಳ ರಾಜೀನಾಮೆ ತಮಗೆ ತಲುಪಬೇಕು ಎಂದೂ ನಿರ್ದೇಶನ ನೀಡಿರುವುದಾಗಿ ರಾಜಭವನ ತಿಳಿಸಿದೆ.

ರಾಜ್ಯಪಾಲರ ಆದೇಶವನ್ನು ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷ ರಾಜ್ಯಪಾಲರ ನಡೆ ಸಂಘಪರಿವಾರದ ಪಿತೂರಿಯಾಗಿದ್ದು, ದೇಶದಲ್ಲಿನ ಶಿಕ್ಷಣ ವ್ಯವಸ್ಥೆಯನ್ನು ಕೇಸರೀಕರಣಗೊಳಿಸುವ ಅಜೆಂಡಾ ಆಗಿದೆ ಎಂದು ಟೀಕಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!