ಪ್ರಧಾನಿ ನರೇಂದ್ರ ಮೋದಿ 
ದೇಶ

ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕರ್ನಾಟಕ ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ ಅವರ ನಿಧನಕ್ಕೆ ಭಾನುವಾರ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಾಮಾಜಿಕ ಸಬಲೀಕರಣಕ್ಕಾಗಿ ವ್ಯಾಪಕವಾಗಿ ಶ್ರಮಿಸಿದ ಅಸಾಧಾರಣ ನಾಯಕ ಎಂದು ಹೇಳಿದ್ದಾರೆ.

ನವದೆಹಲಿ: ಕರ್ನಾಟಕ ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ ಅವರ ನಿಧನಕ್ಕೆ ಭಾನುವಾರ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಾಮಾಜಿಕ ಸಬಲೀಕರಣಕ್ಕಾಗಿ ವ್ಯಾಪಕವಾಗಿ ಶ್ರಮಿಸಿದ ಅಸಾಧಾರಣ ನಾಯಕ ಎಂದು ಹೇಳಿದ್ದಾರೆ.

ಸವದತ್ತಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದ ಮಾಮನಿ ಅವರು ತೀವ್ರ ಅನಾರೋಗ್ಯದಿಂದ ಶನಿವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 56 ವರ್ಷ ವಯಸ್ಸಾಗಿತ್ತು.

'ಕರ್ನಾಟಕ ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ ಅವರ ನಿಧನದಿಂದ ನೋವಾಗಿದೆ. ಅವರು ಸಾಮಾಜಿಕ ಸಬಲೀಕರಣಕ್ಕಾಗಿ ವ್ಯಾಪಕವಾಗಿ ಶ್ರಮಿಸಿದ ಅಸಾಧಾರಣ ನಾಯಕರಾಗಿದ್ದರು. ಅವರು ಕರ್ನಾಟಕದಾದ್ಯಂತ ಬಿಜೆಪಿಯನ್ನು ಬಲಪಡಿಸಲು ಶ್ರಮಿಸಿದರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಸಂತಾಪಗಳು. ಓಂ ಶಾಂತಿ ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಆನಂದ ಮಾಮನಿ ಅವರು ಕ್ಯಾನ್ಸರ್ ಕಾಯಿಲೆಯಿಂದಾಗಿ ಕೆಲ ದಿನಗಳಿಂದ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಅಲ್ಲದೆ, ಇತ್ತೀಚೆಗಷ್ಟೇ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ ಅವರು, ಶೀಘ್ರದಲ್ಲೇ ಗುಣಮುಖವಾಗಿ ಜನ ಸೇವೆಗೆ ಬರುತ್ತೇನೆ. ಯಾರು ಆತಂಕಪಡಬೇಡಿ. ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಚೆನ್ನಾಗಿದ್ದೇನೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ