ಏಕನಾಥ್ ಶಿಂಧೆ 
ದೇಶ

ಶಿಂಧೆ ಬಣದಲ್ಲಿ ಬಿರುಕು; ಶೀಘ್ರದಲ್ಲೆ ಬಿಜೆಪಿ ಸೇರಲಿದ್ದಾರೆ 22 ಶಾಸಕರು: ಶಿವಸೇನೆ ಮುಖವಾಣಿ ಸಾಮ್ನಾ ವರದಿ

ಏಕನಾಥ್ ಶಿಂಧೆ ನೇತೃತ್ವದ ಸೇನೆಯ 40 ಶಾಸಕರ ಪೈಕಿ 22 ಶಾಸಕರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ತನ್ನ ಮುಖವಾಣಿ ಸಾಮ್ನಾದಲ್ಲಿ ಹೇಳಿದೆ.

ಮುಂಬಯಿ: ಏಕನಾಥ್ ಶಿಂಧೆ ನೇತೃತ್ವದ ಸೇನೆಯ 40 ಶಾಸಕರ ಪೈಕಿ 22 ಶಾಸಕರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ತನ್ನ ಮುಖವಾಣಿ ಸಾಮ್ನಾದಲ್ಲಿ ಹೇಳಿದೆ.

ಏಕನಾಥ್ ಶಿಂಧೆ ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದು ಬಿಜೆಪಿ ಮಾಡಿದ ‘ತಾತ್ಕಾಲಿಕ ವ್ಯವಸ್ಥೆ’ ಎಂದು ತನ್ನ ಸಾಪ್ತಾಹಿಕ ಅಂಕಣದಲ್ಲಿ ಬರೆಯಲಾಗಿದೆ. ಅವರ ಮುಖ್ಯಮಂತ್ರಿ ಸಮವಸ್ತ್ರವನ್ನು ಯಾವಾಗ ಬೇಕಾದರೂ ತೆಗೆಯಲಾಗುವುದು ಎಂದು ಈಗ ಎಲ್ಲರಿಗೂ ಅರ್ಥವಾಗಿದೆ. ಅಂಧೇರಿ ಪೂರ್ವ ಉಪಚುನಾವಣೆಯಲ್ಲಿ ಶಿಂಧೆ ಅವರ ಗುಂಪು ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕಿತ್ತು. ಆದರೆ ಅದನ್ನು ತಪ್ಪಿಸಿದ್ದು ಬಿಜೆಪಿ” ಎಂದು ಸಾಮ್ನಾದಲ್ಲಿನ ರೋಕ್‌ಥೋಕ್ ಅಂಕಣದಲ್ಲಿ ಹೇಳಲಾಗಿದೆ.

ಮಹಾರಾಷ್ಟ್ರದ ಗ್ರಾಮ ಪಂಚಾಯಿತಿ ಮತ್ತು ಸರಪಂಚ್ ಚುನಾವಣೆಯಲ್ಲಿ ಶಿಂಧೆ ಬಣದ ಯಶಸ್ಸಿನ ಹೇಳಿಕೆ ಸುಳ್ಳು. ಶಿಂಧೆ ಗುಂಪಿನ ಕನಿಷ್ಠ 22 ಶಾಸಕರು ಅಸಮಾಧಾನಗೊಂಡಿದ್ದಾರೆ. ಈ ಬಹುಪಾಲು ಶಾಸಕರು ಬಿಜೆಪಿಯೊಂದಿಗೆ ವಿಲೀನಗೊಳ್ಳಲಿದ್ದಾರೆ” ಎಂದು ಅಂಕಣದಲ್ಲಿ ಹೇಳಲಾಗಿದೆ.

ಶಿಂಧೆಯವರು ತನಗೆ ಮತ್ತು ಮಹಾರಾಷ್ಟ್ರಕ್ಕೆ ದೊಡ್ಡ ಹಾನಿಯನ್ನು ಉಂಟು ಮಾಡಿದ್ದಾರೆ. ರಾಜ್ಯವು ಅವರನ್ನು ಕ್ಷಮಿಸುವುದಿಲ್ಲ. ಬಿಜೆಪಿ ತಮ್ಮ ಲಾಭಕ್ಕಾಗಿ ಶಿಂಧೆ ಅವರನ್ನು ಇನ್ನೂ ಬಳಸಿಕೊಳ್ಳುತ್ತದೆ’ ಎಂದು ಉದ್ಧವ್ ನೇತೃತ್ವದ ಸೇನೆ ತನ್ನ ಮುಖವಾಣಿಯಲ್ಲಿ ಹೇಳಿಕೊಂಡಿದೆ.

ಶಿಂಧೆ ಅವರ ಮುಖ್ಯಮಂತ್ರಿ ಸಮವಸ್ತ್ರವನ್ನು ಯಾವಾಗ ಬೇಕಾದರೂ ತೆಗೆಯಲಾಗುತ್ತದೆ ಎಂದು ಈಗ ಎಲ್ಲರಿಗೂ ಅರ್ಥವಾಗಿದೆ. ಅಂಧೇರಿ ಪೂರ್ವ ಉಪಚುನಾವಣೆಯಲ್ಲಿ ಶಿಂಧೆ ಅವರ ಗುಂಪು ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕಿತ್ತು. ಆದರೆ ಅದನ್ನು ತಪ್ಪಿಸಿದ್ದು ಬಿಜೆಪಿ" ಎಂದು ಸಾಮ್ನಾದಲ್ಲಿನ ರೋಕ್‌ಥೋಕ್ ಅಂಕಣದಲ್ಲಿ ಹೇಳಲಾಗಿದೆ. ಸರಕಾರದ ಎಲ್ಲಾ ನಿರ್ಧಾರಗಳನ್ನು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತೆಗೆದುಕೊಳ್ಳುತ್ತಾರೆ ಹಾಗೂ  ಸಿಎಂ ಶಿಂಧೆ ಆ ನಿರ್ಧಾರಗಳನ್ನು ಪ್ರಕಟಿಸುತ್ತಾರೆ" ಎಂದು ಅಂಕಣದಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT