ಆನಂದ್ ಮಹಿಂದ್ರ 
ದೇಶ

ಬ್ರಿಟನ್ ಪ್ರಧಾನಿಯಾಗಿ ರಿಷಿ ಸುನಕ್: ಚರ್ಚಿಲ್ ಹೇಳಿದ ಮಾತನ್ನೇ ಪುನರುಚ್ಚರಿಸಿ ಬ್ರಿಟಿಷರಿಗೆ ಆನಂದ್ ಮಹೀಂದ್ರ ತಿರುಗೇಟು!

ಬ್ರಿಟನ್ ಪ್ರಧಾನಿಯಾಗಿ  ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆಯಾಗಿರುವ ಸಂಬಂಧ ಉದ್ಯಮಿ ಆನಂದ್ ಮಹೀಂದ್ರ ಮಾಡಿರುವ ಟ್ವೀಟ್ ಭಾರಿ ಸಂಚಲನ ಸೃಷ್ಟಿಸಿದೆ.

ನವದೆಹಲಿ: ಬ್ರಿಟನ್ ಪ್ರಧಾನಿಯಾಗಿ  ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆಯಾಗಿರುವ ಸಂಬಂಧ ಉದ್ಯಮಿ ಆನಂದ್ ಮಹೀಂದ್ರ ಮಾಡಿರುವ ಟ್ವೀಟ್ ಭಾರಿ ಸಂಚಲನ ಸೃಷ್ಟಿಸಿದೆ.

1947ರಲ್ಲಿ ಭಾರತ ಸ್ವಾತಂತ್ರ್ಯದ ಸಂದರ್ಭದಲ್ಲಿ ಬ್ರಿಟಿಷ್ ಪ್ರಧಾನಿಯಾಗಿದ್ದ ವಿನ್‌ಸ್ಟಂಟ್ ಚರ್ಚಿಲ್ ಹೇಳಿದ ಮಾತನ್ನೇ ಪುನರುಚ್ಚರಿಸಿ, ಬ್ರಿಟಿಷರಿಗೆ  ತಿರುಗೇಟು ನೀಡಿದ್ದಾರೆ.  1947ರಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟ ತೀವ್ರಗೊಂಡಿತು. ಈ ವೇಳೆ ಚರ್ಚಿಲ್, ಎಲ್ಲಾ ಭಾರತೀಯ ನಾಯಕರು ಕಡಿಮೆ ಸಾಮರ್ಥ್ಯ ಹೊಂದಿದ್ದಾರೆ. ಇಷ್ಟೇ ಅಲ್ಲ ದೇಶ ಮುನ್ನಡೆಸುವ ಶಕ್ತಿ ಇಲ್ಲದವರಾಗಿದ್ದಾರೆ ಎಂದಿದ್ದರು. 75ನೇ ವರ್ಷದ ಸ್ವಾತಂತ್ರ್ಯೋತ್ಸವದಲ್ಲಿ ಇದೀಗ ಭಾರತೀಯ ಮೂಲದ ವ್ಯಕ್ತಿ ಬ್ರಿಟನ್ ಪ್ರಧಾನಿಯಾಗಿದ್ದಾರೆ. ಬದುಕು ಸುಂದರವಾಗಿದೆ ಎಂದು ಆನಂದ್ ಮಹೀಂದ್ರ ಟ್ವೀಟ್ ಮಾಡಿದ್ದಾರೆ.

ಈ ಟ್ವೀಟ್ ಹಿಂದೆ ಭಾರತೀಯರನ್ನು ನಿಷ್ಪ್ರಯೋಜಕ ಎಂದಿದ್ದ ಚರ್ಚಿಲ್ ಹಾಗೂ ನಂತರದ ಹಲವು ಬ್ರಿಟಿಷ್ ನಾಯಕರಿಗೆ  ನೀಡಿದ ತಿರುಗೇಟು ಇದಾಗಿದೆ. ವಿಶ್ವದ ಪ್ರಮುಖ ಕಂಪನಿಗಳು, ಕಾರ್ಪೋರೇಟ್ ಕ್ಷೇತ್ರದ ಮುಖ್ಯಸ್ಥರು ಭಾರತೀಯರಾಗಿದ್ದಾರೆ. ಇದೀಗ ವಿಶ್ವದಲ್ಲೇ ಬಲಿಷ್ಠ  ಎಂದು ಗುರುತಿಸಿಕೊಂಡಿರುವ ದೇಶಗಳ ಆಡಳಿತ ಇದೀಗ ಭಾರತೀಯರ ಕೈಗೆ ಸಿಗುತ್ತಿದೆ.

ಭಾರತದ ಮೇಲೆ ಹಲವು ದಾಳಿಗಳು ನಡೆದಿದೆ. ಹಲವರು ಇಡೀ ದೇಶವನ್ನು ತೆಕ್ಕೆಗೆ ತೆಗೆದುಕೊಂಡು ಆಡಳಿತ ನಡೆಸಿ ಭಾರತವನ್ನು ನಿರ್ನಾಮ ಮಾಡುವ ಯತ್ನ ಮಾಡಿದ್ದಾರೆ. ಆದರೆ ಅದು ಸಾಧ್ಯವಾಗಲಿಲ್ಲ. ಇದೀಗ ಭಾರತೀಯರ ಬುದ್ಧಿವಂತಿಕೆ, ಭಾರತೀಯರ ಸಾಮರ್ಥ್ಯದಿಂದ ಒಂದೊಂದು ದೇಶದ ಆಡಳಿತ ಚುಕ್ಕಾಣಿ ಕೈಗೆ ಬರುತ್ತಿದೆ. ಈ ಮೂಲಕ ಆಧುನಿಕ ರೀತಿಯಲ್ಲಿ ಭಾರತ ಹಳೇ ಸೇಡನ್ನು ಯಾವುದೇ ದುರುದ್ದೇಶವಿಲ್ಲದೆ ತೀರಿಸಿಕೊಳ್ಳಲಿದೆ ಎಂದು ಟ್ವಿಟರ್‌ನಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT