ಸಿವಿಕ್ ಚಂದ್ರನ್ 
ದೇಶ

ಲೈಂಗಿಕ ಕಿರುಕುಳ ಪ್ರಕರಣ: ತನಿಖಾಧಿಕಾರಿ ಮುಂದೆ ಲೇಖಕ ಸಿವಿಕ್ ಚಂದ್ರನ್ ಹಾಜರು

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಿಯಾಗಿರುವ  ಬರಹಗಾರ ಮತ್ತು ಸಾಮಾಜಿಕ ಹೋರಾಟಗಾರ ಸಿವಿಕ್ ಚಂದ್ರನ್ ಮಂಗಳವಾರ ಬೆಳಗ್ಗೆ ವಡಗರ ಡಿವೈಎಸ್ ಎದುರು ಶರಣಾಗಿದ್ದಾರೆ.

ಕೋಝಿಕೊಡ್: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಿಯಾಗಿರುವ  ಬರಹಗಾರ ಮತ್ತು ಸಾಮಾಜಿಕ ಹೋರಾಟಗಾರ ಸಿವಿಕ್ ಚಂದ್ರನ್ ಮಂಗಳವಾರ ಬೆಳಗ್ಗೆ ವಡಗರ ಡಿವೈಎಸ್ ಎದುರು ಶರಣಾಗಿದ್ದಾರೆ. ಈ ಹಿಂದೆ ಜಿಲ್ಲಾ ನ್ಯಾಯಾಲಯ ನೀಡಿದ ನಿರೀಕ್ಷಿತ ಜಾಮೀನನ್ನು ಕೇರಳ ಹೈಕೋರ್ಟ್ ರದ್ದುಪಡಿಸಿತು. ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಚಂದ್ರನ್ ಗೆ ಹೈಕೋರ್ಟ್ ನಿರ್ದೇಶಿಸಿತ್ತು.

ವಕೀಲರೊಂದಿಗೆ ಚಂದ್ರನ್ ಡಿವೈಎಸ್ಪಿ ಮುಂದೆ ತನಿಖೆಗೆ ಹಾಜರಾದರು. ಎಲ್ಲಾ ಪ್ರಕ್ರಿಯೆಗಳು ಮುಗಿದ ನಂತರ ಅವರನ್ನು ಜಿಲ್ಲಾ ನ್ಯಾಯಾಲಯದಲ್ಲಿ ಹಾಜರುಪಡಿಸಲಾಯಿತು.  ಏಪ್ರಿಲ್ ನಲ್ಲಿ ಸಿವಿಕ್ ಚಂದ್ರನ್ ಅವರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವುದಾಗಿ ದಲಿತ ಮಹಿಳೆ ದೂರು ದಾಖಲಿಸಿದ್ದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿರುದ್ಧ ದೌರ್ಜನ್ಯ ತಡೆ ಕಾಯ್ದೆ ಸೆಕ್ಷನ್ ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಎರಡು ತಿಂಗಳ ಹಿಂದೆ ಬೇರೆ ಬೇರೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯ ಚಂದ್ರನ್ ಗೆ ಜಾಮೀನು ನೀಡಿತ್ತು. ಜಾಮೀನು ಆದೇಶದಲ್ಲಿ ಸಂತ್ರಸ್ತೆಯ ಉಡುಪಿನ ಬಗ್ಗೆ ಉಲ್ಲೇಖಿಸಲಾಗಿತ್ತು. ತದನಂತರ ಹೈಕೋರ್ಟ್ ಜಾಮೀನನ್ನು ರದ್ದುಪಡಿಸಿತ್ತು, 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT