ಭಾರತೀಯ ರೈಲ್ವೆ 
ದೇಶ

ಮಧ್ಯ ಪ್ರದೇಶ: ರೈಲು ಡಿಕ್ಕಿ ಹೊಡೆದು ಇಬ್ಬರು ಆರ್‌ಪಿಎಫ್ ಪೊಲೀಸರ ಸಾವು

ಅಪಾಯದಲ್ಲಿದ್ದ ಪ್ರಯಾಣಿಕರನ್ನು ತಮ್ಮ ಜೀವದ ಹಂಗು ತೊರೆದು ರಕ್ಷಣೆ ಮಾಡುತ್ತಿದ್ದ ರೈಲ್ವೇ ಸುರಕ್ಷತಾ ಪೊಲೀಸರೇ ಇಂದು ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಮದ್ಯ ಪ್ರದೇಶದಲ್ಲಿ ನಡೆದಿದೆ.

ಭೋಪಾಲ್: ಅಪಾಯದಲ್ಲಿದ್ದ ಪ್ರಯಾಣಿಕರನ್ನು ತಮ್ಮ ಜೀವದ ಹಂಗು ತೊರೆದು ರಕ್ಷಣೆ ಮಾಡುತ್ತಿದ್ದ ರೈಲ್ವೇ ಸುರಕ್ಷತಾ ಪೊಲೀಸರೇ ಇಂದು ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಮದ್ಯ ಪ್ರದೇಶದಲ್ಲಿ ನಡೆದಿದೆ.

ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದು ರೈಲ್ವೇ ರಕ್ಷಣಾ ಪಡೆಯ ಇಬ್ಬರು ಹೆಡ್ ಕಾನ್‌ಸ್ಟೆಬಲ್‌ಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಮೊರೆನಾದಿಂದ ಏಳು ಕಿಮೀ ದೂರದಲ್ಲಿರುವ ಸಾಂಕ್ ರೈಲು ನಿಲ್ದಾಣದಲ್ಲಿ ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಸಂತ್ರಸ್ತರು ಗ್ವಾಲಿಯರ್-ಆಗ್ರಾ ಪ್ಯಾಸೆಂಜರ್ ರೈಲನ್ನು ಅಲ್ಲಿಯೇ ನಿಲ್ಲಿಸಿದ್ದನ್ನು ಪರಿಶೀಲಿಸುತ್ತಿದ್ದರು ಎಂದು ಮೊರೆನಾ ಆರ್‌ಪಿಎಫ್ ಪೊಲೀಸ್ ಠಾಣೆಯ ಉಸ್ತುವಾರಿ ಹರಿಕಿಶನ್ ಮೀನಾ ತಿಳಿಸಿದ್ದಾರೆ. 

ಹೆಡ್ ಕಾನ್‌ಸ್ಟೆಬಲ್‌ಗಳಾದ ಅಶೋಕ್ ಕುಮಾರ್ (56) ಮತ್ತು ನವರಾಜ್ ಸಿಂಗ್ (40) ನಿಲ್ದಾಣದ ಪ್ಯಾಸೆಂಜರ್ ರೈಲನ್ನು ಪರಿಶೀಲಿಸಲು ಮಧ್ಯದ ಹಳಿಯಲ್ಲಿದ್ದಾಗ, ದೆಹಲಿಯಿಂದ ಬರುತ್ತಿದ್ದ ಡ್ಯುರಂಟೋ ಎಕ್ಸ್‌ಪ್ರೆಸ್ ರೈಲು ಹಠಾತ್ತನೆ ಹಾದು ಅವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದರು.

ಇನ್ನೊಂದು ಬದಿಯ ಹಳಿಯಲ್ಲಿ ಗೂಡ್ಸ್ ರೈಲು ನಿಂತಿದ್ದರಿಂದ ಸಂತ್ರಸ್ತರು ಸುರಕ್ಷಿತವಾಗಿ ಓಡಲು ಸಾಧ್ಯವಾಗಲಿಲ್ಲ. ಇಬ್ಬರು ಪೊಲೀಸರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಉನ್ನತಾಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT