ಪೊಲೀಸ್ ದಾಳಿ ನಡೆದ ಫಾರ್ಮ್ ಹೌಸ್ 
ದೇಶ

ತೆಲಂಗಾಣದಲ್ಲಿ ಟಿಆರ್ ಎಸ್ ಶಾಸಕರ ಖರೀದಿ ಯತ್ನ ವಿಫಲ: ನೋಟುಗಳ ಕಂತೆ ಸಮೇತ ನಾಲ್ವರ ಬಂಧನ!

ತೆಲಂಗಾಣದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಟಿಆರ್ ಎಸ್ ಶಾಸಕರ ಖರೀದಿ ಯತ್ನ ಪೊಲೀಸ್ ಕಾರ್ಯಾಚರಣೆಯ ಮೂಲಕ ಬಯಲಿಗೆ ಬಂದಿದೆ.

ಹೈದರಾಬಾದ್: ತೆಲಂಗಾಣದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಟಿಆರ್ ಎಸ್ ಶಾಸಕರ ಖರೀದಿ ಯತ್ನ ಪೊಲೀಸ್ ಕಾರ್ಯಾಚರಣೆಯ ಮೂಲಕ ಬಯಲಿಗೆ ಬಂದಿದೆ.

ಟಿಆರ್ ಎಸ್ ಶಾಸಕರಿಗೆ ಪಕ್ಷಾಂತರ ಮಾಡುವುದಕ್ಕಾಗಿ ದೆಹಲಿಯ ಒಂದಷ್ಟು ಮಂದಿ ಹಲವು ಆಮಿಷಗಳನ್ನೊಡ್ಡಿದ್ದರು. ಇದರ ಯತ್ನದ ಭಾಗವಾಗಿ ಹೈದರಾಬಾದ್ ನ ಹೊರವಲಯದ ಫಾರ್ಮ್ ಹೌಸ್ ನಲ್ಲಿ ನೋಟುಗಳ ಕಂತೆಗಳ ಸಮೇತ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. 

ಬಂಧಿತರನ್ನು ದೆಹಲಿ, ತಿರುಪತಿ ಮತ್ತು ಹೈದರಾಬಾದ್  ಮೂಲದ ಏಜೆಂಟ್ ಗಳೆಂದು ಗುರುತಿಸಲಾಗಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ನೋಟುಗಳ ಕಂತೆಗಳೊಂದಿಗೆ ವಶಕ್ಕೆ ಪಡೆಯಲಾಗಿದೆ.

ನಾಲ್ವರು ವ್ಯಕ್ತಿಗಳು ಹಣ, ಗುತ್ತಿಗೆ ಹಾಗೂ ಪದವಿಯನ್ನು ನೀಡುವುದಾಗಿ ಆಮಿಷವೊಡ್ಡುತ್ತಿದ್ದಾರೆ ಎಂಬ ಮಾಹಿತಿ ಟಿಆರ್ ಎಸ್ ಶಾಸಕರಿಂದ ಲಭ್ಯವಾಗಿತ್ತು. ಈ ಮಾಹಿತಿಯ ಆಧಾರದಲ್ಲಿ ನಾವು ಫಾರ್ಮ್ ಹೌಸ್ ಮೇಲೆ ದಾಳಿನಡೆಸಿದಾಗ ಅಲ್ಲಿ ಮೂವರು ಹಣದ ಸಮೇತ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಸೈಬರಾಬಾದ್ ಪೊಲೀಸ್ ಆಯುಕ್ತ ಸ್ಟೀಫನ್ ರವೀಂದ್ರ ಹೇಳಿದ್ದಾರೆ. 

ಜಿ ಬಾಲರಾಜು, ಬಿ ಹರ್ಷವರ್ಧನ್ ರೆಡ್ಡಿ, ಆರ್ ಕಾಂತಾ ರಾವ್ ಹಾಗೂ ರೋಹಿತ್ ರೆಡ್ಡಿ ಎಂಬ ಶಾಸಕರಿಗೆ ಪಕ್ಷಾಂತರ ಮಾಡುವುದಕ್ಕೆ ಆಮಿಷವೊಡ್ಡಲಾಗಿತ್ತು. ಯಾವ ಪಕ್ಷಕ್ಕೆ ಶಾಸಕರನ್ನು ಪಕ್ಷಾಂತರ ಮಾಡಲು ಆಮಿಷವೊಡ್ಡಲಾಗುತ್ತಿತ್ತು ಎಂಬ ಬಗ್ಗೆ ಮಾಹಿತಿ ಇನ್ನಷ್ಟೇ ಸ್ಪಷ್ಟವಾಗಿದೆ. 

ಈ ಘಟನೆಯ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಸರ್ಕಾರದ ವಿಪ್ ಬಲ್ಕಾ ಸುಮನ್, ಟಿಆರ್ ಎಸ್ ಶಾಸಕರನ್ನು ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ

ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ