ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. 
ದೇಶ

ಹಸಿವು, ಮಾಲಿನ್ಯ ಹೆಚ್ಚಿಸುತ್ತಿರುವ ನವ ಭಾರತ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ

ನವ ಭಾರತ ನಿರ್ಮಾಣದಲ್ಲಿ ಹಸಿವು, ಮಾಲಿನ್ಯ ಹೆಚ್ಚಾಗಿ, ರೂಪಾಯಿ ಮೌಲ್ಯ ಕುಸಿಯುತ್ತಿದೆ. ಹೀಗಾಗಿ ನವ ಭಾರತ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಹೇಳಿದ್ದಾರೆ.

ನವದೆಹಲಿ: ನವ ಭಾರತ ನಿರ್ಮಾಣದಲ್ಲಿ ಹಸಿವು, ಮಾಲಿನ್ಯ ಹೆಚ್ಚಾಗಿ, ರೂಪಾಯಿ ಮೌಲ್ಯ ಕುಸಿಯುತ್ತಿದೆ. ಹೀಗಾಗಿ ನವ ಭಾರತ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಹೇಳಿದ್ದಾರೆ. 

ದೆಹಲಿಯಲ್ಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡಿದರು.

ಬಳಿಕ ಮಾತನಾಡಿದ ಅವರು ಬಿಜೆಪಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ನವ ಭಾರತ ನಿರ್ಮಾಣಕ್ಕೆ ಕಾಂಗ್ರೆಸ್ ಮುಕ್ತ ಭಾರತ ಬೇಕು ಎಂದು ಹೇಳುತ್ತಿದ್ದಾರೆ. ನವ ಭಾರತ ನಿರ್ಮಾಣಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಮುಕ್ತ ಭಾರತ ಬೇಕೆನ್ನುತ್ತಿದ್ದಾರೆಂದು ಹೇಳಿದರು.

ನವ ಭಾರತ ನಿರ್ಮಾಣದಲ್ಲಿ ಹಸಿವು ಹಾಗೂ ಮಾಲಿನ್ಯ ಹೆಚ್ಚಾಗುತ್ತಿದೆ. ರುಪಾಯಿ ಮೌಲ್ಯ ಕುಸಿಯುತ್ತಿದೆ. ಹೀಗಾಗಿ ಆ ನವ ಭಾರತ ನಿರ್ಮಾಣಕ್ಕೆ ನಾವು ಅವಕಾಶ ನೀಡುವುದಿಲ್ಲ. ಇದರ ವಿರುದ್ಧ ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆಂದು ತಿಳಿಸಿದ್ದಾರೆ. 

ಅಧಿಕಾರ ನಡೆಸಬೇಕಿರುವ ಸರ್ಕಾರ ನಿದ್ರೆ ಮಾಡುತ್ತಿದ್ದು, ಸಿಬಿಐ, ಇಡಿ ಮತ್ತು ಐಟಿ ಮಾತ್ರ ದಿನದ 24 ಗಂಟೆಗಳ ಕಾಲ ಕೆಲಸ ಮಾಡುತ್ತಿದೆ. ನವ ಭಾರತದಲ್ಲಿ ಗೋಡ್ಸೆಯನ್ನು ದೇಶ ಭಕ್ತ ಎಂದು ಕರೆಯಲಾಗುತ್ತದೆ. ಮಹಾತ್ಮ ಗಾಂಧೀಜಿಯನ್ನು ದೇಶವಿರೋಧಿ ಎಂದು ಕರೆಯಲಾಗುತ್ತದೆ. ಆರ್'ಎಸ್ಎಸ್ ಸಂವಿಧಾನವನ್ನು ದೇಶದಲ್ಲಿ ಜಾರಿಗೆ ತರಲು ಅವರು ಬಯಸುತ್ತಿದ್ದಾರೆಂದು ಕಿಡಿಕಾರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ