ಸಾಂದರ್ಭಿಕ ಚಿತ್ರ 
ದೇಶ

ಪಾರ್ಕಿಂಗ್ ವಿಚಾರಕ್ಕೆ ಗಲಾಟೆ; ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಲೆ: ವಿಡಿಯೋ ವೈರಲ್

ವಾಹನ ನಿಲುಗಡೆ ಮಾಡುವ ವಿಚಾರವಾಗಿ ಸಂಬಂಧಿಸಿದಂತೆ ಪ್ರಾರಂಭವಾದ ಗಲಾಟೆ ತಾರಕಕ್ಕೇರಿ ಕೊಲೆ ಹಂತಕ್ಕೆ ಹೋಗಿರುವ ಘಟನೆ ಗಾಜಿಯಾಬಾದ್ ನಲ್ಲಿ ನಡೆದಿದೆ.

ಗಾಜಿಯಾಬಾದ್: ವಾಹನ ನಿಲುಗಡೆ ಮಾಡುವ ವಿಚಾರವಾಗಿ ಸಂಬಂಧಿಸಿದಂತೆ ಪ್ರಾರಂಭವಾದ ಗಲಾಟೆ ತಾರಕಕ್ಕೇರಿ ಕೊಲೆ ಹಂತಕ್ಕೆ ಹೋಗಿರುವ ಘಟನೆ ಗಾಜಿಯಾಬಾದ್ ನಲ್ಲಿ ನಡೆದಿದೆ.

ಗಾಜಿಯಾಬಾದ್ ಉಪಾಹಾರ ಗೃಹದಲ್ಲಿ ಈ ಘಟನೆ ನಡೆದಿದ್ದು, ಉಪಾಹಾರ ಗೃಹ ಹೊರಗೆ ವಾಹನ ನಿಲುಗಡೆ ಮಾಡುವ ವಿಚಾರವಾಗಿ ನಿನ್ನೆ ರಾತ್ರಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಪಕ್ಕದ ವಾಹನದ ಬಾಗಿಲು ತೆರೆಯಲು ಸಾಧ್ಯವಾಗದ ರೀತಿಯಲ್ಲಿ ಕಾರು ನಿಲ್ಲಿಸಲಾಗಿತ್ತು.

ಇದು ಕಾರು ಚಾಲಕ ವರುಣ್ ಮತ್ತು ಇನ್ನೊಂದು ಕಾರಿನಲ್ಲಿದ್ದವರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಈ ವಾಗ್ವಾದವು ಸ್ವಲ್ಪದರಲ್ಲೇ ಹೊಡೆದಾಟಕ್ಕೆ ತಿರುಗಿ ವರುಣನ ಮೇಲೆ ಅಮಾನುಷವಾಗಿ ಹಲ್ಲೆ ಮಾಡಲಾಗಿದೆ.  ಇಟ್ಟಿಗೆಯಿಂದ ಹೊಡೆಯುವ ವಿಡಿಯೋವನ್ನು ರಸ್ತೆ ಭಾಗದಲ್ಲಿ ಕಾರಿನಲ್ಲಿ ಚಲಿಸುತ್ತಿದ್ದ ವ್ಯಕ್ತಿಯೊಬ್ಬ ರೆಕಾರ್ಡ್ ಮಾಡಿದ್ದಾರೆ. ಈ ವಿಡಿಯೋ ವ್ಯಾಪಕ ವೈರಲ್ ಆಗಿದೆ.
 
ವರುಣ್ ಉಪಾಹಾರ ಗೃಹದ ಹತ್ತಿರ ವಾಸಿಸುತ್ತಿದ್ದರು ಮತ್ತು ಡೈರಿ ವ್ಯಾಪಾರವನ್ನು ನಡೆಸುತ್ತಿದ್ದರು. ಅವರ ತಂದೆ ದೆಹಲಿಯ ನಿವೃತ್ತ ಪೊಲೀಸ್ ಅಧಿಕಾರಿ. ನಿನ್ನೆ ರಾತ್ರಿ ವರುಣ್ ತನ್ನ ಕಾರನ್ನು ಉಪಾಹಾರ ಗೃಹದ ಹೊರಗೆ ನಿಲ್ಲಿಸಿದ್ದ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪಕ್ಕದ ವಾಹನದ ಬಾಗಿಲು ತೆರೆಯಲು ಸಾಧ್ಯವಾಗದ ರೀತಿಯಲ್ಲಿ ಕಾರು ನಿಲ್ಲಿಸಲಾಗಿತ್ತು. ಇದು ವರುಣ್ ಮತ್ತು ಇನ್ನೊಂದು ಕಾರಿನಲ್ಲಿದ್ದವರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಈ ವಾಗ್ವಾದವು ಸ್ವಲ್ಪದರಲ್ಲೇ ಹೊಡೆದಾಟಕ್ಕೆ ತಿರುಗಿ ವರುಣ್ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಲಾಯಿತು.

ಇದೀಗ ವೈರಲ್ ಆಗಿರುವ ಈ ಅಪರಾಧದ ವಿಡಿಯೋದಲ್ಲಿ ವರುಣನ ತಲೆಯನ್ನು ಇಟ್ಟಿಗೆಯಿಂದ ಹೊಡೆಯುತ್ತಿರುವುದು ಕಂಡುಬರುತ್ತದೆ. ಹಲ್ಲೆಯಿಂದ ಗಾಯಗೊಂಡ ವ್ಯಕ್ತಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.  ಇದೀಗ ಪ್ರಕರಣ ದಾಖಲಾಸಿಕೊಂಡಿರುವ ಗಾಜಿಯಾಬಾದ್ ಪೊಲೀಸರು ತನಿಖೆ ನಡೆಸಿದ್ದಾರೆ. ಆರೋಪಿಗಳಿಗಾಗಿ ಐದು ತಂಡಗಳು ಶೋಧ ನಡೆಸುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT