ಸಂಗ್ರಹ ಚಿತ್ರ 
ದೇಶ

ಛತ್ರಪತಿ ಶಿವಾಜಿ ಫೋಟೋವಿರುವ 200 ರೂಪಾಯಿ ನಕಲಿ ನೋಟು ಹಂಚಿಕೊಂಡ ಬಿಜೆಪಿ ಶಾಸಕ!

ಭಾರತೀಯ ನೋಟುಗಳ ಮೇಲೆ ದೇವರು ಮತ್ತು ದೇವತೆಗಳ ಫೋಟೋಗಳನ್ನು ಮುದ್ರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿಕೆ ಬೆನ್ನಲ್ಲೇ ಇದೀಗ ಬಿಜೆಪಿ ನಾಯಕರೊಬ್ಬರು ಫೋಟೋಶಾಪ್...

ಮುಂಬೈ: ಭಾರತೀಯ ನೋಟುಗಳ ಮೇಲೆ ದೇವರು ಮತ್ತು ದೇವತೆಗಳ ಫೋಟೋಗಳನ್ನು ಮುದ್ರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿಕೆ ಬೆನ್ನಲ್ಲೇ ಇದೀಗ ಬಿಜೆಪಿ ನಾಯಕರೊಬ್ಬರು ಫೋಟೋಶಾಪ್ ಮಾಡಿದ 200 ರೂಪಾಯಿ ನೋಟಿನ ಫೋಟೋವನ್ನು ನೇರವಾಗಿ ಹಂಚಿಕೊಂಡಿದ್ದಾರೆ. ಅದರಲ್ಲಿ ಮರಾಠ ಐಕಾನ್ ಛತ್ರಪತಿ ಶಿವಾಜಿಯನ್ನು ನೋಟಿನಲ್ಲಿ ಮುದ್ರಿಸಲಾಗಿದೆ. 

ಮಹಾರಾಷ್ಟ್ರದ ಕಂಕಾವಲಿಯ ಬಿಜೆಪಿ ಶಾಸಕ ನಿತೇಶ್ ರಾಣೆ ಅವರು ಫೋಟೋವನ್ನು ಟ್ವೀಟ್ ಮಾಡಿ ಅದು ಪರಿಪೂರ್ಣವಾಗಿದೆ ಎಂದು ಬರೆದಿದ್ದಾರೆ. ಕೇಜ್ರಿವಾಲ್ ಅವರಿಂದಲೇ ನೋಟಿನ ಚಿತ್ರ ಬದಲಾಯಿಸುವಂತೆ ಒತ್ತಾಯಿಸುವ ಪ್ರಕ್ರಿಯೆ ಇಲ್ಲಿಯವರೆಗೂ ಮುಂದುವರಿದಿದೆ. ಇದಾದ ನಂತರ ಹಲವು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ತಮ್ಮ ಸಲಹೆಗಳನ್ನು ನೀಡಿದ್ದಾರೆ. ಅದೇ ಸಮಯದಲ್ಲಿ ಕೇಜ್ರಿವಾಲ್ ಅವರನ್ನು ಗುರಿಯಾಗಿಸಿಕೊಂಡಿದ್ದು ಇದು ಚುನಾವಣೆಗೂ ಮೊದಲು 'ಹಿಂದೂ ಕಾರ್ಡ್' ಆಡುವ ಅವರ ಮಾರ್ಗವಾಗಿದೆ ಎಂದು ಬಣ್ಣಿಸಿದ್ದಾರೆ.

ಬಿಜೆಪಿಯು ತನ್ನ ಸರ್ಕಾರದ ಲೋಪದೋಷಗಳಿಂದ ಮತ್ತು ಆಮ್ ಆದ್ಮಿ ಪಕ್ಷದ ಹಿಂದೂ ವಿರೋಧಿ ಮನಸ್ಥಿತಿಯಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು 'ರಾಜಕೀಯ ನಾಟಕ' ಮಾಡಲಾಗುತ್ತಿದೆ ಎಂದು ಹೇಳಿದೆ. ಅದೇ ಸಮಯದಲ್ಲಿ, ಕೇಜ್ರಿವಾಲ್ ತಮ್ಮ ಪತ್ರಿಕಾಗೋಷ್ಠಿಯಲ್ಲಿ ಹೇಳಿರುವುದು ಅವರ ಯು-ಟರ್ನ್ ರಾಜಕೀಯದ ಮತ್ತೊಂದು ವಿಸ್ತರಣೆಯಾಗಿದೆ ಎಂದು ಸಂಬಿತ್ ಪಾತ್ರ ಹೇಳಿದರು.

ಈ ಹಿಂದೆ ದೆಹಲಿಯಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ಆಮ್ ಆದ್ಮಿ ಪಕ್ಷ ಟಿವಿಯಲ್ಲಿ ಹನುಮಾನ್ ಚಾಲೀಸಾ ಪಠಿಸಿದಾಗ ಬಿಜೆಪಿ ತೀವ್ರವಾಗಿ ಪ್ರತಿಕ್ರಿಯಿಸಿತ್ತು. ಕೇಜ್ರಿವಾಲ್ ಮಾತ್ರ ಹನುಮಾನ್ ಚಾಲೀಸಾ ಪಠಣ ಆರಂಭಿಸಿದ್ದಾರೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದರು. ಕಾದು ನೋಡಿ, ಮುಂದೊಂದು ದಿನ ಓವೈಸಿ ಕೂಡ ಹನುಮಾನ್ ಚಾಲೀಸಾ ಪಠಿಸುವುದನ್ನು ಕಾಣಬಹುದು. ಇದೀಗ ನೋಟು ಚಿತ್ರ ಬದಲಿಸುವಂತೆ ಆಗ್ರಹಿಸಿ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸದ್ಯದಲ್ಲೇ ಮೋದಿ ಸಂಪುಟ ಪುನರ್ ರಚನೆ: ಅಮಿತ್ ಶಾಗೆ ಉಪ ಪ್ರಧಾನಿ ಪಟ್ಟ? ವರದಿಗಳು

ಇದು ನಿಜಕ್ಕೂ 'ಅಸಹ್ಯಕರ'; ಹೀಗೆ ಆಗುತ್ತಿರುವುದು ಮೂರನೇ ಬಾರಿ: ಆಕ್ರೋಶ ಹೊರಹಾಕಿದ ನಟಿ ತ್ರಿಶಾ!

ಮೈಸೂರು: ಕಾಡಾನೆ ಕಾರ್ಯಾಚರಣೆಗಳಲ್ಲಿ 'ಅಂಬಾರಿ ಆನೆ' ಅಭಿಮನ್ಯುವಿನ ತಾಕತ್ತಾಗಿದ್ದ ಎಡಭಾಗದ ದಂತವೇ ಮುರಿತ!

ಬೆಂಗಳೂರು: ಅಪಾರ್ಟ್‌ಮೆಂಟ್‌ನಲ್ಲೇ ಹೆಬ್ಬಾವು ಸಾಕಿದ್ದ ಆಸಾಮಿ; ಅರಣ್ಯ ಇಲಾಖೆ ದಾಳಿ!

ಆಗ್ರಾ: ಸೋನಂ, ಸಿಯಾ ಆಯ್ತು, ಈಗ ರೂಬಿ; ಪತಿಯನ್ನು ಕೊಂದು, ಶವವನ್ನು ಬಾತ್ ರೂಂನ ಟೈಲ್ಸ್ ಕೆಳಗೆ ಹೂತು ಹಾಕಿದ್ದ ಮಹಿಳೆಯ ಬಂಧನ!