ಪೊಲೀಸ್ ದಾಳಿ ನಡೆದ ಫಾರ್ಮ್ ಹೌಸ್ 
ದೇಶ

ಟಿಆರ್ ಎಸ್ ಶಾಸಕರ ಖರೀದಿ ಪ್ರಕರಣ: ಸಿಬಿಐ ತನಿಖೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ

ತನ್ನ ವಿರುದ್ಧದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಶಾಸಕರ ಖರೀದಿ ಆರೋಪಕ್ಕೆ ಸಂಬಂಧಿಸಿದ ಪ್ರಕರಣವನ್ನು ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ)ಗೆ ವಹಿಸಬೇಕು ಅಥವಾ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸುವಂತೆ ಕೋರಿ...

ಹೈದರಾಬಾದ್: ತನ್ನ ವಿರುದ್ಧದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಶಾಸಕರ ಖರೀದಿ ಆರೋಪಕ್ಕೆ ಸಂಬಂಧಿಸಿದ ಪ್ರಕರಣವನ್ನು ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ)ಗೆ ವಹಿಸಬೇಕು ಅಥವಾ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸುವಂತೆ ಕೋರಿ ತೆಲಂಗಾಣ ಬಿಜೆಪಿ ಗುರುವಾರ ಹೈಕೋರ್ಟ್‌ಗೆ ಮನವಿ ಸಲ್ಲಿಸಿದೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಗುಜ್ಜುಲ ಪ್ರೇಮೇಂದ್ರ ರೆಡ್ಡಿ ಅವರು ಈ ಸಂಬಂಧ ರಿಟ್ ಅರ್ಜಿ ಸಲ್ಲಿಸಿದ್ದು, ನ್ಯಾಯಯುತ ತನಿಖೆಗಾಗಿ ಪ್ರಕರಣವನ್ನು ಸಿಬಿಐ ವಹಿಸಬೇಕು ಎಂದು ಮನವಿ ಮಾಡಿದ್ದಾರೆ. ಅಲ್ಲದೆ ತಮ್ಮ ಪಕ್ಷದ ನಾಯಕರನ್ನು ಬಂಧಿಸುವ ಏಕೈಕ ಉದ್ದೇಶದಿಂದ ತೆಲಂಗಾಣ ಸರ್ಕಾರ ಪಕ್ಷಪಾತ ಮತ್ತು ಅನ್ಯಾಯದ ತನಿಖೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ಹಣ ಮತ್ತು ಇತರೆ ಒಪ್ಪಂದಗಳ ಆಮಿಷವೊಡ್ಡಿ ತಮ್ಮ ಶಾಸಕರನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಟಿಆರ್‌ಎಸ್ ಆರೋಪಿಸಿದ ಒಂದು ದಿನದ ನಂತರ ಬಿಜೆಪಿ ಹೈಕೋರ್ಟ್ ಮೆಟ್ಟಿಲೇರಿದೆ.

ಟಿಆರ್‌ಎಸ್ ಶಾಸಕರ ಖರೀದಿ ಬಗ್ಗೆ ಮಾಹಿತಿ ನೀಡಿದ ನಂತರ ತೆಲಂಗಾಣ ಪೊಲೀಸರು ಬುಧವಾರ ಸಂಜೆ ರಂಗಾ ರೆಡ್ಡಿಯ ಫಾರ್ಮ್‌ಹೌಸ್‌ನಲ್ಲಿ ಮೂವರನ್ನು ಬಂಧಿಸಿದ್ದಾರೆ.

ಮೂವರು ಆರೋಪಿಗಳನ್ನು ರಾಮಚಂದ್ರ ಭಾರತಿ, ನಂದ ಕುಮಾರ್ ಮತ್ತು ಸಿಂಹಯಾಜಿ ಸ್ವಾಮಿ ಎಂದು ಗುರುತಿಸಲಾಗಿದ್ದು, ಇವರು ಬಿಜೆಪಿಗೆ ಸೇರಿದವರು ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT