ಕೇಂದ್ರ ಸಚಿವ ಕಿಶನ್ ರೆಡ್ಡಿ 
ದೇಶ

'ಕೇವಲ ನಾಲ್ವರಿಂದ ಟಿಆರ್‌ಎಸ್ ಸರ್ಕಾರ ಬೀಳಿಸಲು ಸಾಧ್ಯವೇ?': ಶಾಸಕರ ಖರೀದಿ ಆರೋಪ ತಳ್ಳಿಹಾಕಿದ ಕೇಂದ್ರ ಸಚಿವ

ಮೊಯಿನಾಬಾದ್‌ ಫಾರ್ಮ್‌ಹೌಸ್‌ ಘಟನೆಯನ್ನು ಹಾಲಿ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಅಥವಾ ಆರೋಪಿಗಳು ವಿವಿಧ ರಾಜ್ಯಗಳಿಂದ ಬಂದಿರುವ ಕಾರಣ ಪ್ರಕರಣವನ್ನು ಸಿಬಿಐಗೆ ವಹಿಸಬೇಕು...

ಹೈದರಾಬಾದ್‌: ಮೊಯಿನಾಬಾದ್‌ ಫಾರ್ಮ್‌ಹೌಸ್‌ ಘಟನೆಯನ್ನು ಹಾಲಿ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಅಥವಾ ಆರೋಪಿಗಳು ವಿವಿಧ ರಾಜ್ಯಗಳಿಂದ ಬಂದಿರುವ ಕಾರಣ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ ಅವರು ಗುರುವಾರ ಹೇಳಿದ್ದಾರೆ.

ಇದೇ ವೇಳೆ ನೂರು ಕೋಟಿ ಆಮಿಷವೊಡ್ಡಿ ಟಿಆರ್‌ಎಸ್ ಪಕ್ಷದ ನಾಲ್ವರು ಶಾಸಕರನ್ನು ಸೆಳೆಯಲು ಬಿಜೆಪಿ ಯತ್ನಿಸಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡರ ಪ್ರತಿಕೃತಿ ದಹಿಸಿ ಟಿಆರ್‌ಎಸ್ ಮುಖಂಡರ ಪ್ರತಿಭಟನೆ ನಡೆಸುತ್ತಿರುವುದನ್ನು ಕೇಂದ್ರ ಸಚಿವರು ಖಂಡಿಸಿದರು.

ಇಂದು ನಾಂಪಲ್ಲಿಯ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ರೆಡ್ಡಿ, ಮುನುಗೋಡು ಉಪಚುನಾವಣೆಯಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಪ್ರಗತಿ ಭವನದಲ್ಲಿ ಟಿಆರ್‌ಎಸ್ ಸೃಷ್ಟಿಸಿದ ನಾಟಕ ಎಂದರು. ಅಲ್ಲದೆ ಶಾಸಕರ ಖರೀದಿ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದರು.

ಕೇವಲ ನಾಲ್ವರು ಶಾಸಕರು ಬಿಜೆಪಿ ಸೇರಿದ ಮಾತ್ರಕ್ಕೆ ಟಿಆರ್‌ಎಸ್ ಸರ್ಕಾರವನ್ನು ಬೀಳಿಸಲು ಸಾಧ್ಯವೇ? ಈ ನಾಲ್ವರು ಶಾಸಕರು ತಮ್ಮ ಕ್ಷೇತ್ರದ ಜನರಿಂದ ಬೆಂಬಲ ಪಡೆದಿದ್ದಾರೆಯೇ ಮತ್ತು ಅವರು ಪ್ರಾಮಾಣಿಕರೇ? ಎಂದು ಅವರು ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?