ಸಾಂದರ್ಭಿಕ ಚಿತ್ರ 
ದೇಶ

ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದನ್ನು ತಪ್ಪಿಸುವುದು ಬಿಟ್ಟು ವಿಡಿಯೋ ರೆಕಾರ್ಡ್ ಮಾಡಿದ ಪತಿ!

ಮಹಿಳೆಯೊಬ್ಬಳು ಸೀಲಿಂಗ್ ಫ್ಯಾನ್‍ಗೆ ನೇಣು ಹಾಕಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ನೋಡಿದ ಪತಿ  ಆಕೆಯನ್ನು ಉಳಿಸುವ ಬದಲು ಅದನ್ನು ವೀಡಿಯೋ ಮಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ  ನಡೆದಿದೆ.

ಲಕ್ನೋ: ಮಹಿಳೆಯೊಬ್ಬಳು ಸೀಲಿಂಗ್ ಫ್ಯಾನ್‍ಗೆ ನೇಣು ಹಾಕಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ನೋಡಿದ ಪತಿ  ಆಕೆಯನ್ನು ಉಳಿಸುವ ಬದಲು ಅದನ್ನು ವೀಡಿಯೋ ಮಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ  ನಡೆದಿದೆ.

ಉತ್ತರ ಪ್ರದೇಶದ ಗುಲ್ಮೊಹರ್ ನಗರದಲ್ಲಿ ಈ ಘಟನೆ ನಡೆದಿದೆ. ಶೋಭಿತಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಹಾಗೂ ಸಂಜೀವ್ ಗುಪ್ತಾ ವೀಡಿಯೋ ಮಾಡಿದ ಆಕೆ ಪತಿ. ಶೋಭಿತಾ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವಾಗ ಆಕೆಯನ್ನು ಉಳಿಸುವ ಯಾವುದೇ ಪ್ರಯತ್ನವನ್ನು ಮಾಡಿರಲಿಲ್ಲ. ಬದಲಿಗೆ ವೀಡಿಯೋ ಮಾಡುತ್ತಾ ನಿಂತಿದ್ದ. ಈ ವೇಳೆ ಶೋಭಿತಾ ತನ್ನ ಮೊದಲ ಪ್ರಯತ್ನದಲ್ಲಿ ವಿಫಲಳಾದರೂ ಎರಡನೇ ಪ್ರಯತ್ನದಲ್ಲಿ ನೇಣು ಹಾಕಿಕೊಳ್ಳುವಲ್ಲಿ ಆಕೆ ಯಶಸ್ವಿಯಾಗುತ್ತಾಳೆ.

ಶೋಭೀತಾ ನೇಣು ಬಿಗಿದುಕೊಂಡು ಎಷ್ಟೇ ಒದ್ದಾಡುತ್ತಿದ್ದರೂ ಇದನ್ನು ವೀಡಿಯೋ ಮಾಡಿಕೊಳ್ಳುತ್ತಿದ್ದ ಸಂಜೀವ್ ಗುಪ್ತಾ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿರಲಿಲ್ಲ. ಅದಾದ ಬಳಿಕ ಸಂಜೀವ್ ಗುಪ್ತಾ ಘಟನೆಗೆ ಸಂಬಂಧಿಸಿ ಶೋಭಿತಾಳ ತಂದೆ ರಾಜ್ ಕಿಶೋರ್ ಗುಪ್ತಾಗೆ ಕರೆ ಮಾಡಿ, ಶೋಭಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದ.

ಈ ಹಿನ್ನೆಲೆಯಲ್ಲಿ ಕಿಶೋರ್ ಗುಪ್ತಾ ಗುಲ್ಮೊಹರ್ ನಗರದಲ್ಲಿರುವ ಶೋಭಿತಾಳ ಮನೆಗೆ ಹೋಗಿದ್ದಾರೆ. ಈ ವೇಳೆ ಹಾಸಿಗೆಯ ಮೇಲೆ ಆಕೆಯ ಶವವನ್ನು ಕಂಡಿದ್ದಾರೆ. ಅಷ್ಟೇ ಅಲ್ಲದೇ ಸಂಜೀವ್ ಅವಳು ಬದುಕಿಸಲು ಪ್ರಯತ್ನಿಸುತ್ತಿದ್ದ. ಆದರೆ ಅದಾಗಲೇ ಶೋಭಿತಾ ಶವವಾಗಿದ್ದಳು. ಘಟನೆಗೆ ಸಂಬಂಧಿಸಿ ರಾಜ್ ಕಿಶೋರ್ ಸಂಜೀವ್‍ನನ್ನು ವಿಚಾರಿಸಿದ್ದಾನೆ. ಆ ವೇಳೆ ಸಂಜೀವ್ ವೀಡಿಯೋವನ್ನು ರಾಜ್ ಕಿಶೋರ್‍ಗೆ ತೋರಿಸಿದ್ದಾನೆ.

ಶೋಭಿತಾಳ ಕುಟುಂಬದವರು ಘಟನೆಗೆ ಸಂಬಂಧಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT