ಅರವಿಂದ್ ಕೇಜ್ರಿವಾಲ್ 
ದೇಶ

ಕರೆನ್ಸಿ ಮೇಲೆ ಲಕ್ಷ್ಮಿ, ಗಣೇಶ ಚಿತ್ರ ಮುದ್ರಿಸಿ: ಮೋದಿಗೆ ಕೇಜ್ರಿವಾಲ್ ಪತ್ರ

ನೋಟುಗಳಲ್ಲಿ ಲಕ್ಷ್ಮಿ ಮತ್ತು ಗಣೇಶನ ಚಿತ್ರಗಳನ್ನು ಅಳವಡಿಸುವಂತೆ ಮನವಿ ಮಾಡುವ ಮೂಲಕ ರಾಜಕೀಯ ಗದ್ದಲ ಸೃಷ್ಟಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ತಮ್ಮ ಬೇಡಿಕೆ  ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ನವದೆಹಲಿ: ನೋಟುಗಳಲ್ಲಿ ಲಕ್ಷ್ಮಿ ಮತ್ತು ಗಣೇಶನ ಚಿತ್ರಗಳನ್ನು ಅಳವಡಿಸುವಂತೆ ಮನವಿ ಮಾಡುವ ಮೂಲಕ ರಾಜಕೀಯ ಗದ್ದಲ ಸೃಷ್ಟಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ತಮ್ಮ ಬೇಡಿಕೆ  ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಭಾರತದ ಆರ್ಥಿಕತೆ ಸರಿಯಾದ ರೀತಿಯಲ್ಲಿ ಇಲ್ಲ ಎಂದು ಬುಧವಾರ ಹೇಳಿದ ಕೇಜ್ರಿವಾಲ್, ಆರ್ಥಿಕತೆಯನ್ನು ಮತ್ತೆ ಸರಿಯಾದ ದಾರಿಗೆ ತರುವ ನಿಟ್ಟಿನಲ್ಲಿ ನೋಟುಗಳ ಮೇಲೆ ದೇವರುಗಳ ಚಿತ್ರ ಮುದ್ರಿಸುವಂತೆ ಹೇಳಿಕೆ ನೀಡಿದ್ದರು.

ಭಾರತೀಯ ಕರೆನ್ಸಿಯ ಒಂದು ಬದಿಯಲ್ಲಿ ಗಾಂಧೀಜಿ ಮತ್ತು ಇನ್ನೊಂದು ಬದಿಯಲ್ಲಿ ಗಣೇಶ ಮತ್ತು ಲಕ್ಷ್ಮೀ ಅವರ ಚಿತ್ರ ಇರಬೇಕು ಎಂದು ದೇಶದ 130 ಕೋಟಿ ಜನರು ಬಯಸುತ್ತಾರೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.  ಇದರ ಬಗ್ಗೆ ಅಪಾರವಾದ ಬೆಂಬಲ ವ್ಯಕ್ತವಾಗಿದೆ. ಜನರಲ್ಲಿ ಭಾರೀ ಉತ್ಸಾಹವಿದೆ ಮತ್ತು ಎಲ್ಲರೂ ಇದನ್ನು ತಕ್ಷಣವೇ ಜಾರಿಗೆ ತರಬೇಕೆಂದು ಬಯಸುತ್ತಿದ್ದಾರೆ ಎಂದು ಕೇಜ್ರಿವಾಲ್ ಪ್ರತಿಪಾದಿಸಿದ್ದಾರೆ. ಭಾರತದ ಆರ್ಥಿಕತೆಯು ಅತ್ಯಂತ ಕೆಟ್ಟ ಹಂತಕ್ಕೆ ತಲುಪಿದೆ. ಭಾರತವು 75 ವರ್ಷಗಳ ಸ್ವಾತಂತ್ರ್ಯದ ಹೊರತಾಗಿಯೂ ಅಭಿವೃದ್ಧಿಶೀಲ ರಾಷ್ಟ್ರಗಳ ಪಟ್ಟಿಯಲ್ಲಿದೆ ಎಂದು ಅರವಿಂದ್ ಕೇಜ್ರಿವಾಲ್  ಹೇಳಿದ್ದಾರೆ. 

ಒಂದೆಡೆ  ದೇಶವಾಸಿಗಳೆಲ್ಲಾ ಕಷ್ಟಪಟ್ಟು ಕೆಲಸ ಮಾಡಬೇಕಾಗಿದೆ, ಮತ್ತೊಂದೆಡೆ, ನಮ್ಮ ಪ್ರಯತ್ನಗಳು ಫಲ ನೀಡಲು ನಮಗೆ ದೇವತೆಗಳ ಆಶೀರ್ವಾದವೂ ಬೇಕು ಎಂದು ಕೇಜ್ರಿವಾಲ್ ಪತ್ರದಲ್ಲಿ ಬರೆದಿದ್ದಾರೆ. ಕೇಜ್ರಿವಾಲ್ ಅವರ ಬೇಡಿಕೆಯು ಬಿಜೆಪಿಯನ್ನು ಗೊಂದಲಕ್ಕೆ ಸಿಲುಕಿಸಿದೆ. ಇದು ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಎಎಪಿಯ "ಕೊಳಕು ಹಿಂದೂ ವಿರೋಧಿ ಮುಖ" ವನ್ನು ಮರೆಮಾಚುವ ವಿಫಲ ಪ್ರಯತ್ನ ಎಂದು ಕರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ ಗಳು!

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!

ಎಲ್.ಕೆ. ಅಡ್ವಾಣಿ, ಮನೀಶ್ ಸಿಸೋಡಿಯಾ ಸೇರಿದಂತೆ ದೆಹಲಿಯ 33.13 ಲಕ್ಷ ಮತದಾರರಿಗೆ SIR ನೋಟಿಸ್‌!

ವಾರಣಾಸಿ ಎನ್‌ಕೌಂಟರ್‌ನಲ್ಲಿ 30 ಲಕ್ಷ ಬಹುಮಾನ ಹೊಂದಿದ್ದ ನಕ್ಸಲ್ ಕಮಾಂಡರ್ ಹತ್ಯೆ!