ಫಡ್ನವಿಸ್-ಏಕನಾಥ್ ಶಿಂಧೆ 
ದೇಶ

ಮಹಾರಾಷ್ಟ್ರ: 25 ಎಂವಿಎ ನಾಯಕರ ಭದ್ರತೆ ಹಿಂಪಡೆದ ಮಹಾರಾಷ್ಟ್ರ ಸರ್ಕಾರ

ಮಹಾರಾಷ್ಟ್ರ ಸರ್ಕಾರ ಮಹಾ ವಿಕಾಸ್ ಅಘಾಡಿ ಮೈತ್ರಿಯ 25 ನಾಯಕರ ಶ್ರೇಣೀಕೃತ ಭದ್ರತೆಯನ್ನು ವಾಪಸ್ ಪಡೆದಿದೆ.

ಮುಂಬೈ: ಮಹಾರಾಷ್ಟ್ರ ಸರ್ಕಾರ ಮಹಾ ವಿಕಾಸ್ ಅಘಾಡಿ ಮೈತ್ರಿಯ 25 ನಾಯಕರ ಶ್ರೇಣೀಕೃತ ಭದ್ರತೆಯನ್ನು ವಾಪಸ್ ಪಡೆದಿದೆ.

ಭದ್ರತೆಯನ್ನು ಹಿಂಪಡೆದಿರುವ ಪರಿಣಾಮ ಈ ನಾಯಕರ ಮನೆಯ ಬಳಿ ಶಾಶ್ವತ ಬೆಂಗಾವಲು ಪಡೆ ಅಥವಾ ಪೊಲೀಸ್ ಭದ್ರತೆ ಇರುವುದಿಲ್ಲ. ಈ ನಾಯಕರ ಭದ್ರತಾ ಗ್ರಹಿಕೆಯ ಹೊಸ ಮೌಲ್ಯಮಾಪನದ ಆಧಾರದಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತೆಯನ್ನು ಕಳೆದುಕೊಂಡವರ ಪೈಕಿ ಹಲವರು ಮಾಜಿ ಸಚಿವರಾಗಿದ್ದು, ಮಾಜಿ ಸಿಎಂ ಉದ್ಧವ್ ಠಾಕ್ರೆ ಹಾಗೂ ಅವರ ಕುಟುಂಬದ ಭದ್ರತೆಯನ್ನು ಮುಂದುವರೆಸಲಾಗಿದೆ.

ಎನ್ ಸಿಪಿ ನಾಯಕ ಶರದ್ ಪವಾರ್, ಅವರ ಕುಟುಂಬದ ಭದ್ರತೆಯನ್ನು ಮುಂದುವರೆಸಲಾಗಿದ್ದರೆ, ಅದೇ ಪಕ್ಷದ ಜಯಂತ್ ಪಾಟೀಲ್, ಛಗನ್ ಬುಜ್ಬಲ್ ಹಾಗೂ ಅನಿಲ್ ದೇಶ್ ಮುಖ್ ಅವರ ಭದ್ರತೆಯನ್ನು ಹಿಂಪಡೆಯಲಾಗಿದೆ. ಪಾಟೀಲ್ ಹಾಗೂ ಭುಜ್ಬಲ್ ಹಾಗೂ ದೇಶ್ ಮುಖ್ ಅವರು ಈ ಹಿಂದೆ ಗೃಹ ಸಚಿವರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT