ಪಿಎಂ ನರೇಂದ್ರ ಮೋದಿ 
ದೇಶ

ಪೊಲೀಸರಿಗೆ 'ಒಂದು ರಾಷ್ಟ್ರ, ಒಂದು ಸಮವಸ್ತ್ರ' ನೀತಿಯನ್ನು ತಂದರೆ ಉತ್ತಮ: ಪ್ರಧಾನಿ ನರೇಂದ್ರ ಮೋದಿ

'ಒಂದು ರಾಷ್ಟ್ರ, ಒಂದು ಚುನಾವಣೆ' ನಡೆಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಬಹಳ ಒಲವು ಹೊಂದಿದ್ದಾರೆ. ಅದಿನ್ನೂ ಜಾರಿಗೆ ಬಂದಿಲ್ಲ. ಈ ಮಧ್ಯೆ, ಪೊಲೀಸರಿಗೆ ‘ಒಂದು ರಾಷ್ಟ್ರ, ಒಂದು ಸಮವಸ್ತ್ರ’ ಕಲ್ಪನೆಯನ್ನು ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದಾರೆ.

ಸೂರಜ್‌ಕುಂಡ್ (ಹರಿಯಾಣ): 'ಒಂದು ರಾಷ್ಟ್ರ, ಒಂದು ಚುನಾವಣೆ' ನಡೆಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಬಹಳ ಒಲವು ಹೊಂದಿದ್ದಾರೆ. ಅದಿನ್ನೂ ಜಾರಿಗೆ ಬಂದಿಲ್ಲ. ಈ ಮಧ್ಯೆ, ಪೊಲೀಸರಿಗೆ ‘ಒಂದು ರಾಷ್ಟ್ರ, ಒಂದು ಸಮವಸ್ತ್ರ’ ಕಲ್ಪನೆಯನ್ನು ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದಾರೆ. ಆದರೆ ಇದು ಕೇವಲ ತಮ್ಮ ಸಲಹೆಯಾಗಿದ್ದು, ಅದನ್ನು ರಾಜ್ಯಗಳ ಮೇಲೆ ಹೇರಲು ಬಯಸುವುದಿಲ್ಲ ಎಂದಿದ್ದಾರೆ. 

ರಾಜ್ಯ ಗೃಹ ಮಂತ್ರಿಗಳ "ಚಿಂತನ್ ಶಿಬಿರ" ವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಅಪರಾಧಗಳು ಮತ್ತು ಅಪರಾಧಿಗಳನ್ನು ನಿಭಾಯಿಸಲು ರಾಜ್ಯಗಳ ನಡುವೆ ನಿಕಟ ಸಹಕಾರದ ಅಗತ್ಯವನ್ನು ಒತ್ತಿ ಹೇಳಿದರು. ಸಹಕಾರಿ ಒಕ್ಕೂಟವು ಸಂವಿಧಾನದ ಭಾವನೆ ಮಾತ್ರವಲ್ಲದೆ ರಾಜ್ಯಗಳು ಮತ್ತು ಕೇಂದ್ರದ ಜವಾಬ್ದಾರಿಯಾಗಿದೆ ಎಂದು ಹೇಳಿದರು. 

ಪೊಲೀಸರಿಗೆ 'ಒಂದು ರಾಷ್ಟ್ರ, ಒಂದು ಸಮವಸ್ತ್ರ'ವು ಕೇವಲ ಆಲೋಚನೆಯಾಗಿದೆ. ಅದನ್ನು ನಾನು ರಾಜ್ಯಗಳ ಮೇಲೆ ಹೇರುವುದಿಲ್ಲ, ಆಲೋಚನೆ ಮಾಡಿ ಮನಸ್ಸು ಮಾಡಿದರೆ ಜಾರಿಗೆ ತರಬಹುದು. ಇದು 5, 50, ಅಥವಾ 100 ವರ್ಷಗಳಲ್ಲಿ ಆಗಬಹುದು. ಸ್ವಲ್ಪ ಯೋಚಿಸಿ ಎಂದಷ್ಟೇ ಹೇಳಿದರು.

ದೇಶದಾದ್ಯಂತ ಪೊಲೀಸರ ಗುರುತು ಒಂದೇ ಆಗಿದ್ದರೆ ಚೆನ್ನಾಗಿರುತ್ತದೆ ಎಂದು ನಾನು ಆಶಿಸುತ್ತೇನೆ ಎಂದರು. ಕಾನೂನು ಮತ್ತು ಸುವ್ಯವಸ್ಥೆ ಮತ್ತು ಭದ್ರತೆಯ ಹಲವು ಸವಾಲುಗಳನ್ನು ಎದುರಿಸಲು ಪೊಲೀಸ್ ಇಲಾಖೆಗೆ ಸಂಬಂಧಪಟ್ಟ ಎಲ್ಲಾ ಏಜೆನ್ಸಿಗಳು ಸಂಘಟಿತ ಕ್ರಮ ಕೈಗೊಳ್ಳಬೇಕು. ಹಳೆಯ ಕಾನೂನುಗಳನ್ನು ಪರಿಶೀಲಿಸಬೇಕು ಮತ್ತು ಪ್ರಸ್ತುತ ಸಂದರ್ಭಕ್ಕೆ ತಿದ್ದುಪಡಿ ಮಾಡಬೇಕೆಂದು ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದರು.

ಪೊಲೀಸರ ಬಗ್ಗೆ ಉತ್ತಮ ಗ್ರಹಿಕೆಯನ್ನು ಕಾಯ್ದುಕೊಳ್ಳುವುದು ಬಹಳ ಮುಖ್ಯ ಇಲ್ಲಿನ ತಪ್ಪು, ಲೋಪದೋಷಗಳನ್ನು ಗಮನಿಸಿ ಪರಿಹರಿಸಬೇಕು. ದಕ್ಷತೆ, ಉತ್ತಮ ಫಲಿತಾಂಶ ಮತ್ತು ಸಾಮಾನ್ಯ ಜನರಿಗೆ ರಕ್ಷಣೆಯನ್ನು ನೀಡಲು ಪೊಲೀಸ್ ಮತ್ತು ಗುಪ್ತಚರ ಸಂಸ್ಥೆಗಳು ಪರಸ್ಪರ ಸಹಕರಿಸಬೇಕು ಎಂದು ಸಹ ಪ್ರತಿಪಾದಿಸಿದರು. 

ಪೊಲೀಸ್ ಇಲಾಖೆಯನ್ನು ಬಲಪಡಿಸಲು, ಉತ್ತಮ ಫಲಿತಾಂಶವನ್ನು ತರಲು ಪೊಲೀಸ್ ಮತ್ತು ಭದ್ರತಾ ಏಜೆನ್ಸಿಗಳಿಂದ ಮಾನವ ಬುದ್ಧಿಮತ್ತೆಯನ್ನು (Human intelligence) ಉತ್ಪಾದಿಸುವ ಹಳೆಯ ಉತ್ತಮ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಕೂಡ ಪ್ರಧಾನಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT