ಮನೀಶ್ ಸಿಸೋಡಿಯಾ 
ದೇಶ

ಟಿಆರ್ ಎಸ್ ಶಾಸಕರ ಖರೀದಿ ಪ್ರಕರಣ: ಅಮಿತ್ ಶಾ ಬಂಧಿಸುವಂತೆ ಮನೀಶ್ ಸಿಸೋಡಿಯಾ ಆಗ್ರಹ

ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್‌)ಯ ಕೆಲವು ಶಾಸಕರಿಗೆ ಲಂಚ ನೀಡಿ ಅವರನ್ನು ಬಿಜೆಪಿಗೆ ಕರೆತರಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕತ್ವದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ದೆಹಲಿ ಉಪಮುಖ್ಯಮಂತ್ರಿ ಮನೀಶ್‌...

ನವದೆಹಲಿ: ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್‌)ಯ ಕೆಲವು ಶಾಸಕರಿಗೆ ಲಂಚ ನೀಡಿ ಅವರನ್ನು ಬಿಜೆಪಿಗೆ ಕರೆತರಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕತ್ವದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ದೆಹಲಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. 

ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿ ಸರ್ಕಾರಗಳನ್ನು ಉರುಳಿಸಲು 'ಆಪರೇಷನ್ ಕಮಲ' ಎಂದು ಕರೆಯಲಾಗುವ ಕಾರ್ಯದಲ್ಲಿ ಅಮಿತ್ ಶಾ ಭಾಗಿಯಾಗಿದ್ದಾರೆ ಎಂದು ಆಪ್ ನಾಯಕ ಆರೋಪಿಸಿದ್ದಾರೆ.

ಈ ಹಿಂದೆ ದೆಹಲಿ, ಪಂಜಾಬ್ ಮತ್ತು ಇತರ ಎಂಟು ರಾಜ್ಯಗಳಲ್ಲಿ ಶಾಸಕರ ಖರೀದಿಗೆ ಬಿಜೆಪಿ   ಪ್ರಯತ್ನ ಮಾಡಿತ್ತು. ಈ ಬಾರಿ ತೆಲಂಗಾಣದಲ್ಲಿ ಬಿಜೆಪಿಯ ಡರ್ಟಿ ಗೇಮ್ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ ಎಂದು ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕ ಹೇಳಿದ್ದಾರೆ.

ಬಿಜೆಪಿಗೆ ಸೇರಲು ಕೆಲವು ಟಿಆರ್‌ಎಸ್ ಶಾಸಕರಿಗೆ ಲಂಚ ನೀಡಲು ಪ್ರಯತ್ನಿಸುತ್ತಿರುವ ಮೂವರು ವ್ಯಕ್ತಿಗಳ ನಡುವಿನ ಸಂಭಾಷಣೆಯ ಆಡಿಯೊ ಕ್ಲಿಪ್ ಅನ್ನು ಉಲ್ಲೇಖಿಸಿದ ಸಿಸೋಡಿಯಾ, ಅದರಲ್ಲಿ ಒಬ್ಬ ವ್ಯಕ್ತಿ "ಶಾಹ್ ಜಿ" ಎಂದು ಹೇಳಲಾಗಿದೆ ಎಂದು ಶ್ರೀ ಸಿಸೋಡಿಯಾ ಹೇಳಿದ್ದಾರೆ.

"ಶಾಹ್ ಜಿ' ಹೆಸರು ನಿಜವಾಗಿಯೂ ಪ್ರಸ್ತಾಪ ಆಗಿದ್ದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು. ಯಾಕೆಂದರೆ ಒಬ್ಬ ದಲ್ಲಾಳಿ, ಶಾಸಕರೊಬ್ಬರನ್ನು ಖರೀದಿಸಲು ಹೋಗಿ ಸಿಕ್ಕಿಬಿದ್ದರೆ ಮತ್ತು ದೇಶದ ಗೃಹ ಸಚಿವರ ಹೆಸರು ಅದರಲ್ಲಿ ಕೇಳಿ ಬಂದರೆ ಅದು ಇಡೀ ದೇಶಕ್ಕೆ ತುಂಬಾ ಅಪಾಯಕಾರಿ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT