ದೆಹಲಿ ಸಿಎಂ ಕೇಜ್ರಿವಾಲ್ 
ದೇಶ

ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನ: ಅಪ್ಪು ನೆನೆದ ಕೇಜ್ರಿವಾಲ್

ಪವರ್‌ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರು ‘ಅಪ್ಪು‘ ನೆನೆದು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.

ನವದೆಹಲಿ: ಪವರ್‌ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರು ‘ಅಪ್ಪು‘ ನೆನೆದು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.

ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನ, ಈ ದಿನ ಅವರನ್ನು ನಾನು ಗಾಢವಾಗಿ ನೆನಪಿಸಿಕೊಳ್ಳುತ್ತಿದ್ದೇನೆ. ಸಿನಿಮಾ, ಹಾಡುಗಳು, ಸಾಮಾಜಿಕ ಕಾರ್ಯಗಳ ಮೂಲಕ ಪುನೀತ್ ಈಗಲೂ ನಮ್ಮ ಬಳಿಯೇ ಇದ್ದಾರೆ. ಅವರು ನಮ್ಮಿಂದ ದೂರವಾಗಿಲ್ಲ. ಪುನೀತ್‌ ಎಂದೆಂದಿಗೂ ಕರುನಾಡಿನ ಪವರ್ ಸ್ಟಾರ್ ಎಂದು ಹೇಳಿದ್ದಾರೆ. 

ಪುನೀತ್ ರಾಜ್ ಕುಮಾರ್ ಅವರ ಮೊದಲ ಪುಣ್ಯಸ್ಮರಣೆ ಸಂದರ್ಭದಲ್ಲೇ ರಾಜ್ಯ ಸರ್ಕಾರ ಅಪ್ಪು ಅವರಿಗೆ ನವೆಂಬರ್ 1 ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುತ್ತಿದ್ದು, ಕಾರ್ಯಕ್ರಮದಲ್ಲಿ ದಕ್ಷಿಣದ ಇಬ್ಬರು ಸ್ಟಾರ್ ನಟರು ಅತಿಥಿಗಳಾಗಿ ಆಗಮಿಸಲಿದ್ದಾರೆಂದು ತಿಳಿದುಬಂದಿದೆ.

ಕಾರ್ಯಕ್ರವನ್ನು ನವೆಂಬರ್ 1 ರಂದು ವಿಧಾನಸೌಧದ ಮುಂಭಾಗದಲ್ಲಿ ಆಯೋಜನೆ ಮಾಡಲಾಗಿದ್ದು, ಡಾ.ರಾಜ್ ಕುಟುಂಬ ಹಾಗೂ ಅಭಿಮಾನಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ