ದೇಶ

ಡಿಎಂಕೆ ನಾಯಕನ ಅವಹೇಳನಕಾರಿ ಹೇಳಿಕೆ: ಕ್ಷಮೆ ಕೇಳಿದ್ರು ಒಪ್ಪಲ್ಲ- ಖುಷ್ಬು

Nagaraja AB

ಚೆನ್ನೈ:  ಖುಷ್ಬು ಮತ್ತು ಬಿಜೆಪಿಯ ಇತರ ಮಹಿಳೆಯರನ್ನು ಐಟಂ ಎಂದು ಟೀಕಿಸಿದ್ದ ಡಿಎಂಕೆ ನಾಯಕ ಸೈದಾಯಿ ಸಿದ್ದಿಕ್ ಅವರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಖುಷ್ಬು, ಡಿಎಂಕೆ ನಾಯಕ ನನ್ನನ್ನು ಮಾತ್ರ ಅಮಾನಿಸಿಲ್ಲ, ಮಹಿಳೆಯರು ಹಾಗೂ ಅವರ ಕುಟುಂಬ ವರ್ಗದವರನ್ನು ಅವಮಾನಿಸಿದ್ದಾರೆ. ಸಾಮಾನ್ಯರಂತೆ ಹೇಳಿಕೆ ನೀಡಿರುವ ಅವರು ಕ್ಷಮೆ ಸ್ವೀಕರಿಸಲು ನಾನು ಸಿದ್ದರಿಲ್ಲ ಎಂದಿದ್ದಾರೆ.

ನನಗೆ ಬೆಂಬಲ ನೀಡಿರುವ ಡಿಎಂಕೆ ಸಂಸದೆ ಕನ್ನಿಮೋಳಿ ಅವರನ್ನು ನಿಜಕ್ಕೂ ಪ್ರಶಂಸಿಸುತ್ತೇನೆ. ಮಹಿಳೆಯರ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಯಾವಾಗಲೂ ಅವರು ಬೆಂಬಲಿಸುತ್ತಿರುವುದನ್ನು ನಾನು ನೋಡಿದ್ದೇನೆ ಎಂದು ಅವರು ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಮಹಿಳೆಯರ ಬಗ್ಗೆ ಇತರರು ಈ ರೀತಿಯ ಹೇಳಿಕೆ ನೀಡದಂತೆ ಸಿಎಂ ಕ್ರಮ ಕೈಗೊಳ್ಳುವುದ್ದಕ್ಕಾಗಿ ಅವರೊಂದಿಗೆ ಮಾತನಾಡಲು ಕಾಯುತ್ತಿದ್ದೇನೆ. ತಮಿಳುನಾಡು ಮುಖ್ಯಮಂತ್ರಿ ಉತ್ತಮ ಉದಾಹರಣೆಯಾಗಬೇಕೆಂದು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ. 

SCROLL FOR NEXT