ಆರೋಪಿಗಳು 
ದೇಶ

ಟಿಆರ್‌ಎಸ್ ಶಾಸಕರ ಖರೀದಿ ಪ್ರಕರಣ: ಆರೋಪಿಗಳನ್ನು ಮತ್ತೆ ಬಂಧಿಸಿದ ಸೈಬರಾಬಾದ್ ಪೊಲೀಸರು

ತೀವ್ರ ಸಂಚಲನ ಮೂಡಿಸಿದ್ದ ಟಿಆರ್ ಎಸ್ 'ಶಾಸಕರ ಖರೀದಿ' ಪ್ರಕರಣದ ಮೂವರು ಆರೋಪಿಗಳನ್ನು ಸೈಬರಾಬಾದ್ ಪೊಲೀಸರು ಶನಿವಾರ ಮತ್ತೆ ಬಂಧಿಸಿದ್ದಾರೆ.

ಹೈದರಾಬಾದ್: ತೀವ್ರ ಸಂಚಲನ ಮೂಡಿಸಿದ್ದ ಟಿಆರ್ ಎಸ್ 'ಶಾಸಕರ ಖರೀದಿ' ಪ್ರಕರಣದ ಮೂವರು ಆರೋಪಿಗಳನ್ನು ಸೈಬರಾಬಾದ್ ಪೊಲೀಸರು ಶನಿವಾರ ಮತ್ತೆ ಬಂಧಿಸಿದ್ದಾರೆ.

ಆರೋಪಿಗಳ ಬಂಧನವನ್ನು ತಿರಸ್ಕರಿಸಿದ್ದ ಕೆಳ ನ್ಯಾಯಾಲಯದ ಆದೇಶವನ್ನು ತೆಲಂಗಾಣ ಹೈಕೋರ್ಟ್ ರದ್ದುಗೊಳಿಸಿದ ಕೆಲವೇ ಗಂಟೆಗಳಲ್ಲಿ ಪೊಲೀಸರು ಮತ್ತೆ ಬಂಧಿಸಿದ್ದಾರೆ.

ನಂದು ಅವರ ನಿವಾಸದಲ್ಲಿ ಬಿಜೆಪಿ ಜೊತೆ ನಂಟು ಹೊಂದಿದ್ದ ರಾಮಚಂದ್ರ ಭಾರತಿ ಅಲಿಯಾಸ್ ಸತೀಶ್ ಶರ್ಮಾ, ಕೋರೆ ನಂದ ಕುಮಾರ್ ಅಲಿಯಾಸ್ ನಂದು ಮತ್ತು ಸಿಂಹಯಾಜಿ ಅವರನ್ನು ಬಂಧಿಸಲಾಗಿದೆ.

ನಂತರ ಆರೋಪಿಗಳನ್ನು ಸೈಬರಾಬಾದ್ ಪೊಲೀಸ್ ಕಮಿಷನರೇಟ್‌ಗೆ ಕರೆದೊಯ್ದು, ಅಲ್ಲಿಂದ ಮೊಯಿನಾಬಾದ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. 

ಅಕ್ಟೋಬರ್ 26 ರಂದು ತೋಟದ ಮನೆಯಲ್ಲಿ ತೆಲಂಗಾಣ ರಾಷ್ಟ್ರ ಸಮಿತಿಯ(ಟಿಆರ್‌ಎಸ್) ನಾಲ್ವರು ಶಾಸಕರಿಗೆ ಭಾರಿ ಹಣದ ಆಮಿಷ ಒಡ್ಡಲು ಪ್ರಯತ್ನಿಸುತ್ತಿದ್ದಾಗ ಅವರನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಲಾಗಿತ್ತು.

ಪೊಲೀಸರು ಆರೋಪಿಗಳನ್ನು ಮತ್ತೆ ಹಾಜರುಪಡಿಸಿದರೆ ಅವರನ್ನು ಕಸ್ಟಡಿಗೆ ಕಳುಹಿಸುವಂತೆ ಕೆಳ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶಿಸಿದ ಒಂದೆರಡು ಗಂಟೆಗಳ ನಂತರ ಆರೋಪಿಗಳನ್ನು ಮತ್ತೆ ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT