ಆರೋಪಿಗಳು 
ದೇಶ

ಟಿಆರ್‌ಎಸ್ ಶಾಸಕರ ಖರೀದಿ ಪ್ರಕರಣ: ಆರೋಪಿಗಳನ್ನು ಮತ್ತೆ ಬಂಧಿಸಿದ ಸೈಬರಾಬಾದ್ ಪೊಲೀಸರು

ತೀವ್ರ ಸಂಚಲನ ಮೂಡಿಸಿದ್ದ ಟಿಆರ್ ಎಸ್ 'ಶಾಸಕರ ಖರೀದಿ' ಪ್ರಕರಣದ ಮೂವರು ಆರೋಪಿಗಳನ್ನು ಸೈಬರಾಬಾದ್ ಪೊಲೀಸರು ಶನಿವಾರ ಮತ್ತೆ ಬಂಧಿಸಿದ್ದಾರೆ.

ಹೈದರಾಬಾದ್: ತೀವ್ರ ಸಂಚಲನ ಮೂಡಿಸಿದ್ದ ಟಿಆರ್ ಎಸ್ 'ಶಾಸಕರ ಖರೀದಿ' ಪ್ರಕರಣದ ಮೂವರು ಆರೋಪಿಗಳನ್ನು ಸೈಬರಾಬಾದ್ ಪೊಲೀಸರು ಶನಿವಾರ ಮತ್ತೆ ಬಂಧಿಸಿದ್ದಾರೆ.

ಆರೋಪಿಗಳ ಬಂಧನವನ್ನು ತಿರಸ್ಕರಿಸಿದ್ದ ಕೆಳ ನ್ಯಾಯಾಲಯದ ಆದೇಶವನ್ನು ತೆಲಂಗಾಣ ಹೈಕೋರ್ಟ್ ರದ್ದುಗೊಳಿಸಿದ ಕೆಲವೇ ಗಂಟೆಗಳಲ್ಲಿ ಪೊಲೀಸರು ಮತ್ತೆ ಬಂಧಿಸಿದ್ದಾರೆ.

ನಂದು ಅವರ ನಿವಾಸದಲ್ಲಿ ಬಿಜೆಪಿ ಜೊತೆ ನಂಟು ಹೊಂದಿದ್ದ ರಾಮಚಂದ್ರ ಭಾರತಿ ಅಲಿಯಾಸ್ ಸತೀಶ್ ಶರ್ಮಾ, ಕೋರೆ ನಂದ ಕುಮಾರ್ ಅಲಿಯಾಸ್ ನಂದು ಮತ್ತು ಸಿಂಹಯಾಜಿ ಅವರನ್ನು ಬಂಧಿಸಲಾಗಿದೆ.

ನಂತರ ಆರೋಪಿಗಳನ್ನು ಸೈಬರಾಬಾದ್ ಪೊಲೀಸ್ ಕಮಿಷನರೇಟ್‌ಗೆ ಕರೆದೊಯ್ದು, ಅಲ್ಲಿಂದ ಮೊಯಿನಾಬಾದ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. 

ಅಕ್ಟೋಬರ್ 26 ರಂದು ತೋಟದ ಮನೆಯಲ್ಲಿ ತೆಲಂಗಾಣ ರಾಷ್ಟ್ರ ಸಮಿತಿಯ(ಟಿಆರ್‌ಎಸ್) ನಾಲ್ವರು ಶಾಸಕರಿಗೆ ಭಾರಿ ಹಣದ ಆಮಿಷ ಒಡ್ಡಲು ಪ್ರಯತ್ನಿಸುತ್ತಿದ್ದಾಗ ಅವರನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಲಾಗಿತ್ತು.

ಪೊಲೀಸರು ಆರೋಪಿಗಳನ್ನು ಮತ್ತೆ ಹಾಜರುಪಡಿಸಿದರೆ ಅವರನ್ನು ಕಸ್ಟಡಿಗೆ ಕಳುಹಿಸುವಂತೆ ಕೆಳ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶಿಸಿದ ಒಂದೆರಡು ಗಂಟೆಗಳ ನಂತರ ಆರೋಪಿಗಳನ್ನು ಮತ್ತೆ ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT