ತೆಲಂಗಾಣ ಹೈಕೋರ್ಟ್ 
ದೇಶ

ಟಿಆರ್ ಎಸ್ ಶಾಸಕರ ಖರೀದಿ ಯತ್ನ ಕೇಸು: ರಾಜ್ಯ ಸರ್ಕಾರ ಪರವಾಗಿ ಹೈಕೋರ್ಟ್ ಆದೇಶ

ನಾಲ್ವರು ಟಿಆರ್‌ಎಸ್ ಶಾಸಕರ ಖರೀದಿ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ರಾಜ್ಯ ಸರ್ಕಾರದ ಪರವಾಗಿ ಆದೇಶ ಹೊರಡಿಸಿದೆ. 

ಹೈದರಾಬಾದ್: ನಾಲ್ವರು ಟಿಆರ್‌ಎಸ್ ಶಾಸಕರ ಖರೀದಿ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ರಾಜ್ಯ ಸರ್ಕಾರದ ಪರವಾಗಿ ಆದೇಶ ಹೊರಡಿಸಿದೆ. 

ಮೂವರು ಆರೋಪಿಗಳ ಬಂಧನದ ವಿರುದ್ಧ ತೀರ್ಪು ನೀಡಿದ ಎಸಿಬಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಆದೇಶವನ್ನು ರದ್ದುಗೊಳಿಸಿದ ಹೈಕೋರ್ಟ್, ರಾಮಚಂದ್ರ ಭಾರತಿ ಅಲಿಯಾಸ್ ಸತೀಶ್ ಶರ್ಮಾ, ಕೆ.ನಂದಕುಮಾರ್ ಮತ್ತು ಡಿಪಿಎಸ್‌ಕೆವಿಎನ್ ಸಿಂಹಯಾಜುಲು ಅವರಿಗೆ ಸೈಬರಾಬಾದ್ ಪೊಲೀಸ್ ಆಯುಕ್ತರ ಮುಂದೆ 24 ಗಂಟೆಗಳ ಒಳಗೆ ಶರಣಾಗುವಂತೆ ಇಂದು ಆದೇಶ ನೀಡಿದೆ.

ಮೂವರು ಆರೋಪಿಗಳನ್ನು ಬಂಧಿಸಿ ವಿಶೇಷ ಎಸಿಬಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿದೆ.

ಪ್ರಕರಣದಲ್ಲಿ, ಲಂಚದ ಹಣದ ಬಗ್ಗೆ ಯಾವುದೇ ಪುರಾವೆಗಳಿಲ್ಲ ಮತ್ತು ಸಿಆರ್‌ಪಿಸಿಯ ಸೆಕ್ಷನ್ 41 (ಎ) ಪ್ರಕಾರ ಪೊಲೀಸರು ನೋಟಿಸ್‌ ನೀಡಬಹುದು. ಪ್ರಕರಣದ ತನಿಖೆಗೆ ಆರೋಪಿಗಳನ್ನು ಕರೆಯಬಹುದು ಎಂದು ಎಸಿಬಿ ನ್ಯಾಯಾಲಯದ ನ್ಯಾಯಾಧೀಶರು ಉಲ್ಲೇಖಿಸಿದ್ದನ್ನು ಸ್ಮರಿಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT