ಪ್ರಾತಿನಿಧಿಕ ಚಿತ್ರ 
ದೇಶ

ವಾಹನ ನಿಲುಗಡೆ ವಿಚಾರವಾಗಿ ವಿವಾದ; ಟ್ಯಾಕ್ಸಿ ಚಾಲಕ, ಆತನ ತಂದೆಗೆ ಚಾಕು ಇರಿದಿದ್ದ ಆರೋಪಿಗಳ ಬಂಧನ

ಗೋವಾದ ಮಾಪುಸಾ ಪಟ್ಟಣದಲ್ಲಿ ವಾಹನ ನಿಲುಗಡೆ ವಿಚಾರವಾಗಿ ನಡೆದ ವಾದ ವಿವಾದದಲ್ಲಿ ಟ್ಯಾಕ್ಸಿ ಚಾಲಕ ಮತ್ತು ಆತನ ತಂದೆಗೆ ಚಾಕುವಿನಿಂದ ಇರಿದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಪಣಜಿ: ಗೋವಾದ ಮಾಪುಸಾ ಪಟ್ಟಣದಲ್ಲಿ ವಾಹನ ನಿಲುಗಡೆ ವಿಚಾರವಾಗಿ ನಡೆದ ವಾದ ವಿವಾದದಲ್ಲಿ ಟ್ಯಾಕ್ಸಿ ಚಾಲಕ ಮತ್ತು ಆತನ ತಂದೆಗೆ ಚಾಕುವಿನಿಂದ ಇರಿದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಸಮೀರ್ ಪೆಡ್ನೇಕರ್ ಮತ್ತು ಸುರೇಶ್ ಕುಂಬಾರ್ ಎಂಬ ಇಬ್ಬರು ಆರೋಪಿಗಳನ್ನು ಶುಕ್ರವಾರ ಸಂಜೆ ಬಂಧಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಜಿವ್ಬಾ ದಳವಿ ಸುದ್ದಿಗಾರರಿಗೆ ತಿಳಿಸಿದರು.

ಸಂತ್ರಸ್ತ ಬ್ರಿಜೇಶ್ ಶಿರೋದ್ಕರ್ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

'ಆರೋಪಿಗಳು ತಮ್ಮ ದ್ವಿಚಕ್ರ ವಾಹನವನ್ನು ತಮ್ಮ ಕ್ಯಾಬ್ ಪಕ್ಕದಲ್ಲಿ ನಿಲ್ಲಿಸಿದ ನಂತರ ವಾಗ್ವಾದ ಉಂಟಾಯಿತು. ಬಳಿಕ ಆರೋಪಿಗಳು ತನಗೆ ಮತ್ತು ತನ್ನ ತಂದೆಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಶಿರೋದ್ಕರ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ' ಎಂದು ದಳವಿ ಹೇಳಿದ್ದಾರೆ.

ಈ ಸಂಬಂಧ ಇಬ್ಬರ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT