ವಂದೇ ಭಾರತ್ ರೈಲು 
ದೇಶ

ಜಾನುವಾರುಗೆ ಡಿಕ್ಕಿ ಹೊಡೆದ ವಂದೇ ಭಾರತ್ ರೈಲು; ಒಂದೇ ತಿಂಗಳಲ್ಲಿ ಇದು ಮೂರನೇ ಬಾರಿ!

ಮುಂಬೈ- ಗಾಂಧಿನಗರ ನಡುವೆ ಓಡಾಡುವ 'ವಂದೇ ಭಾರತ್ ಸೂಪರ್ ಪಾಸ್ಟ್ ಎಕ್ಸ್ ಪ್ರೆಸ್ ರೈಲು' ಇಂದು ಮತ್ತೆ ಜಾನುವಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ  ಸಂಚಾರದಲ್ಲಿ 20 ನಿಮಿಷ ವ್ಯತ್ಯಯವಾಯಿತು ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  

ಮುಂಬೈ: ಮುಂಬೈ- ಗಾಂಧಿನಗರ ನಡುವೆ ಓಡಾಡುವ 'ವಂದೇ ಭಾರತ್ ಸೂಪರ್ ಪಾಸ್ಟ್ ಎಕ್ಸ್ ಪ್ರೆಸ್ ರೈಲು' ಇಂದು ಮತ್ತೆ ಜಾನುವಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ  ಸಂಚಾರದಲ್ಲಿ 20 ನಿಮಿಷ ವ್ಯತ್ಯಯವಾಯಿತು ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  

ಘಟನೆಯಿಂದಾಗಿ ರೈಲ್ವಿನ ಮುಂಭಾಗದ ಪ್ಯಾನಲ್ ಗೆ ಹಾನಿಯಾಗಿದೆ. ಅದರ ಮೊದಲ ಬೋಗಿಯ ಉಪಕರಣಗಳು ಮುರಿದಿವೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಇದು ಈ ತಿಂಗಳಲ್ಲಿ ಸಂಭವಿಸಿದ ಮೂರನೇ ಪ್ರಕರಣವಾಗಿದೆ.  

ಬೆಳಗ್ಗೆ 8-20ರ ಸುಮಾರಿನಲ್ಲಿ ಅಟಲ್ ರೈಲ್ವೆ ನಿಲ್ದಾಣದ ಬಳಿಕ ಜಾನುವಾರ ಹಳಿ ಮೇಲೆ ಬಂದಾಗ ರೈಲು ಡಿಕ್ಕಿ ಹೊಡೆದಿದೆ. ಘಟನೆಯಿಂದಾಗಿ ರೈಲ್ವೆ ಸುಮಾರು 20 ನಿಮಿಷ ಅಲ್ಲಿಯೇ ನಿಲ್ಲಬೇಕಾಯಿತು, ನಂತರ ಸಂಚಾರವನ್ನು ಪುನರ್ ಆರಂಭಿಸಿತು. ಪ್ರಯಾಣಿಕರೆಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಪಶ್ಚಿಮ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸುಮಿತ್ ಠಾಕೂರ್  ತಿಳಿಸಿದ್ದಾರೆ. 

ಅಕ್ಟೋಬರ್  6 ರಂದು ಇದೇ ಮಾರ್ಗದಲ್ಲಿ ಈ ರೈಲು ಡಿಕ್ಕಿ ಹೊಡೆದು ನಾಲ್ಕು ಎಮ್ಮೆಗಳು ಸಾವನ್ನಪ್ಪಿದ್ದವು. ಅಕ್ಟೋಬರ್ 7 ರಂದು ಗುಜರಾತ್ ನ ಆನಂದ್ ಬಳಿ ಹಸುವೊಂದಕ್ಕೆ ವಂದೇ ಭಾರತ್ ಸೂಪರ್ ಪಾಸ್ಟ್ ಎಕ್ಸ್ ಪ್ರೆಸ್ ಡಿಕ್ಕಿ ಹೊಡೆದಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT