ಅಸಾದುದ್ದೀನ್ ಓವೈಸಿ 
ದೇಶ

ಜನರಿಂದ ಮತ ಪಡೆಯಲು 'ಏಕರೂಪ ನಾಗರಿಕ ಸಂಹಿತೆ' ಪ್ರಸ್ತಾಪ ಮಾಡಿದೆ ಬಿಜೆಪಿ: ಓವೈಸಿ

ಗುಜರಾತ್ ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತ ಗಳಿಸಲು ಬಿಜೆಪಿ ಇದೀಗ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ವಿಚಾರವನ್ನು ಪ್ರಸ್ತಾಪ ಮಾಡಿದೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದಿನ್ ಓವೈಸಿ ಹೇಳಿದ್ದಾರೆ.

ವಡೋದರಾ: ಗುಜರಾತ್ ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತ ಗಳಿಸಲು ಬಿಜೆಪಿ ಇದೀಗ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ವಿಚಾರವನ್ನು ಪ್ರಸ್ತಾಪ ಮಾಡಿದೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದಿನ್ ಓವೈಸಿ ಹೇಳಿದ್ದಾರೆ. 

ಗುಜರಾತ್ ನ ಬಸಸ್ಕಾಂತ ಜಿಲ್ಲೆಯಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, “ಏಕರೂಪ ನಾಗರಿಕ ಸಂಹಿತೆ ಸ್ವಯಂ ಪ್ರೇರಿತವಾಗಿರಬೇಕು, ಕಡ್ಡಾಯವಲ್ಲ ಎಂದು ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದು ನಿಜವಲ್ಲವೇ?  ಆದರೆ ಬಿಜೆಪಿಯು ತನ್ನ ಹಿಂದುತ್ವದ ಅಜೆಂಡಾದೊಂದಿಗೆ ಮುಂದುವರಿಯಲು ಬಯಸುತ್ತದೆ. ಹೀಗಾಗಿ ಮತ ಪಡೆಯಲು ಚುನಾವಣೆಗೆ ಮುನ್ನ ಇಂತಹ ವಿಷಯಗಳನ್ನು ಕೆದಕುತ್ತಿದೆ ಎಂದು ಹೇಳಿದ್ದಾರೆ. 

ಏಕರೂಪ ನಾಗರಿಕ ಸಂಹಿತೆಯು ಅಗತ್ಯವೂ ಅಲ್ಲ, ಅಪೇಕ್ಷಿತವೂ ಅಲ್ಲ ಎಂದು 2018ರಲ್ಲಿ ಕಾನೂನು ಆಯೋಗ ಹೇಳಿದೆ. “ಮುಸ್ಲಿಮನಿಗೆ ಮದುವೆಯು ಒಂದು ಒಪ್ಪಂದ, ಹಿಂದೂಗಳಿಗೆ ಅದು ಶಾಶ್ವತವಾಗಿ ಬದುಕುವುದು, ಇದು ಭಾರತದ ಬಹುತ್ವವಾಗಿದೆ. ಯುಸಿಸಿಯನ್ನು ಜಾರಿಗೊಳಿಸುವ ಮೂಲಕ ಯಾರಾದರೂ ಆರ್ಟಿಕಲ್ 29 (ಅಲ್ಪಸಂಖ್ಯಾತ ಗುಂಪುಗಳ ಹಿತಾಸಕ್ತಿಗಳನ್ನು ರಕ್ಷಿಸುತ್ತದೆ) ವಿರುದ್ಧ ಕಾನೂನನ್ನು ಮಾಡಬಹುದೇ?” ಎಂದು ಪ್ರಶ್ನಿಸಿದ್ದಾರೆ.

ಹಿಂದೂ ಅವಿಭಜಿತ ಕುಟುಂಬದ ಅಡಿಯಲ್ಲಿ ಆದಾಯ ತೆರಿಗೆ ರಿಯಾಯಿತಿಯ ಪ್ರಯೋಜನದಿಂದ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಏಕೆ ಹೊರಗಿಡಲಾಗಿದೆ ಎಂದು ನಾನು ಪ್ರಧಾನಿಯನ್ನು ಕೇಳಲು ಬಯಸುತ್ತೇನೆ? ಇದು ಸಮಾನತೆಯ ಹಕ್ಕಿಗೆ ವಿರುದ್ಧವಾಗಿಲ್ಲವೇ?” ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT