ಅಸಾದುದ್ದೀನ್ ಓವೈಸಿ 
ದೇಶ

ಜನರಿಂದ ಮತ ಪಡೆಯಲು 'ಏಕರೂಪ ನಾಗರಿಕ ಸಂಹಿತೆ' ಪ್ರಸ್ತಾಪ ಮಾಡಿದೆ ಬಿಜೆಪಿ: ಓವೈಸಿ

ಗುಜರಾತ್ ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತ ಗಳಿಸಲು ಬಿಜೆಪಿ ಇದೀಗ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ವಿಚಾರವನ್ನು ಪ್ರಸ್ತಾಪ ಮಾಡಿದೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದಿನ್ ಓವೈಸಿ ಹೇಳಿದ್ದಾರೆ.

ವಡೋದರಾ: ಗುಜರಾತ್ ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತ ಗಳಿಸಲು ಬಿಜೆಪಿ ಇದೀಗ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ವಿಚಾರವನ್ನು ಪ್ರಸ್ತಾಪ ಮಾಡಿದೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದಿನ್ ಓವೈಸಿ ಹೇಳಿದ್ದಾರೆ. 

ಗುಜರಾತ್ ನ ಬಸಸ್ಕಾಂತ ಜಿಲ್ಲೆಯಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, “ಏಕರೂಪ ನಾಗರಿಕ ಸಂಹಿತೆ ಸ್ವಯಂ ಪ್ರೇರಿತವಾಗಿರಬೇಕು, ಕಡ್ಡಾಯವಲ್ಲ ಎಂದು ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದು ನಿಜವಲ್ಲವೇ?  ಆದರೆ ಬಿಜೆಪಿಯು ತನ್ನ ಹಿಂದುತ್ವದ ಅಜೆಂಡಾದೊಂದಿಗೆ ಮುಂದುವರಿಯಲು ಬಯಸುತ್ತದೆ. ಹೀಗಾಗಿ ಮತ ಪಡೆಯಲು ಚುನಾವಣೆಗೆ ಮುನ್ನ ಇಂತಹ ವಿಷಯಗಳನ್ನು ಕೆದಕುತ್ತಿದೆ ಎಂದು ಹೇಳಿದ್ದಾರೆ. 

ಏಕರೂಪ ನಾಗರಿಕ ಸಂಹಿತೆಯು ಅಗತ್ಯವೂ ಅಲ್ಲ, ಅಪೇಕ್ಷಿತವೂ ಅಲ್ಲ ಎಂದು 2018ರಲ್ಲಿ ಕಾನೂನು ಆಯೋಗ ಹೇಳಿದೆ. “ಮುಸ್ಲಿಮನಿಗೆ ಮದುವೆಯು ಒಂದು ಒಪ್ಪಂದ, ಹಿಂದೂಗಳಿಗೆ ಅದು ಶಾಶ್ವತವಾಗಿ ಬದುಕುವುದು, ಇದು ಭಾರತದ ಬಹುತ್ವವಾಗಿದೆ. ಯುಸಿಸಿಯನ್ನು ಜಾರಿಗೊಳಿಸುವ ಮೂಲಕ ಯಾರಾದರೂ ಆರ್ಟಿಕಲ್ 29 (ಅಲ್ಪಸಂಖ್ಯಾತ ಗುಂಪುಗಳ ಹಿತಾಸಕ್ತಿಗಳನ್ನು ರಕ್ಷಿಸುತ್ತದೆ) ವಿರುದ್ಧ ಕಾನೂನನ್ನು ಮಾಡಬಹುದೇ?” ಎಂದು ಪ್ರಶ್ನಿಸಿದ್ದಾರೆ.

ಹಿಂದೂ ಅವಿಭಜಿತ ಕುಟುಂಬದ ಅಡಿಯಲ್ಲಿ ಆದಾಯ ತೆರಿಗೆ ರಿಯಾಯಿತಿಯ ಪ್ರಯೋಜನದಿಂದ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಏಕೆ ಹೊರಗಿಡಲಾಗಿದೆ ಎಂದು ನಾನು ಪ್ರಧಾನಿಯನ್ನು ಕೇಳಲು ಬಯಸುತ್ತೇನೆ? ಇದು ಸಮಾನತೆಯ ಹಕ್ಕಿಗೆ ವಿರುದ್ಧವಾಗಿಲ್ಲವೇ?” ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT