ಸೇತುವೆ ಮೇಲೆ ಕಿಕ್ಕಿರಿಸಿದ್ದ ಜನರು 
ದೇಶ

80 ಜನರನ್ನು ಬಲಿ ಪಡೆದ ಗುಜರಾತ್ ನ ಕೇಬಲ್ ಸೇತುವೆ ದುರಂತಕ್ಕೆ ಕಾರಣ?

ಗುಜರಾತ್ ನಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಮೊರ್ಬಿ ಪ್ರದೇಶದಲ್ಲಿ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕೇಬಲ್ ಸೇತುವೆ ಕುಸಿದು ಸದ್ಯ 80 ಮಂದಿ ಮೃತಪಟ್ಟಿದ್ದು ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ.

ಅಹಮದಾಬಾದ್: ಗುಜರಾತ್ ನಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಮೊರ್ಬಿ ಪ್ರದೇಶದಲ್ಲಿ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕೇಬಲ್ ಸೇತುವೆ ಕುಸಿದು ಸದ್ಯ 80 ಮಂದಿ ಮೃತಪಟ್ಟಿದ್ದು ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ.

ಸಂಜೆ 6.30ರ ಸುಮಾರಿಗೆ ಈ ದುರಂತ ಸಂಭವಿಸಿದ್ದು ಈ ವೇಳೆ ಸೇತುವೆ ಮೇಲೆ ಮಕ್ಕಳು, ವೃದ್ಧರೂ ಸೇರಿದಂತೆ 400ಕ್ಕೂ ಹೆಚ್ಚು ಜನರು ನೆರೆದಿದ್ದರು. ಸೇತುವೆ ಕುಸಿತದಿಂದಾಗಿ ಹಲವಾರು ಜನರು ನದಿಗೆ ಬಿದ್ದಿದ್ದಾರೆ. ಸದ್ಯ 250ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದ್ದು ಕಾರ್ಯಾಚರಣೆ ಭರದಿಂದ ಸಾಗಿದೆ. ಪೊಲೀಸರು, ಅಗ್ನಿಶಾಮಕ ತುರ್ತು ಸೇವೆಗಳು ಮತ್ತು ಮೂರು ಎನ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿವೆ. 

ಇನ್ನು ಮೋರ್ಬಿ ಕೇಬಲ್ ಸೇತುವೆಯ ವಿಡಿಯೋವೊಂದು ವೈರಲ್ ಆಗಿದೆ. ವಿಡಿಯೋದಲ್ಲಿ ಸೇತುವೆ ಮೇಲೆ ಜನರು ಕಿಕ್ಕಿರಿದು ತುಂಬಿರುವುದು ಕಾಣಬಹುದಾಗಿದೆ. ಇನ್ನು ಕೆಲ ಯುವಕರು ಹುಚ್ಚಾಟ ಮೆರೆದಿದ್ದಾರೆ. ಸೇತುವೆಗೆ ಅಳವಡಿಸಿದ್ದ ಕಬ್ಬಿಣದ ಸರಳುಗಳನ್ನು ಕಾಲಿನಿಂದ ಒದೆಯುತ್ತಿರುವುದು ಮೊಬೈಲ್ ನಲ್ಲಿ ಸೆರೆಯಾಗಿದೆ.

ಘಟನೆ ಕುರಿತಂತೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಗುಜರಾತ್ ಸಿಎಂ ಭುಪೇಂದ್ರ ಸಿಂಗ್ ಆಘಾತ ವ್ಯಕ್ತಪಡಿಸಿದ್ದು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಸೇತುವೆಯ ನವೀಕರಣ ಕಾಮಗಾರಿ ಕೇವಲ ಒಂದು ವಾರದ ಹಿಂದೆ ಮುಕ್ತಾಯಗೊಂಡಿತ್ತು. ಮೂರು ದಿನಗಳ ಹಿಂದೆ ಸೇತುವೆಯನ್ನು ಮತ್ತೊಮ್ಮೆ ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿತ್ತು. ಹೀಗಾಗಿ ನೂರಾರು ಜನರು ಸೇತುವೆಯನ್ನು ವೀಕ್ಷಿಸಲು ಬಂದಿದ್ದಾಗ ಈ ದುರುಂತ ಸಂಭವಿಸಿದೆ.

ಇನ್ನು ಅಧಿಕಾರಿಗಳು ವಿವರಿಸುವಂತೆ ಸೇತುವೆ ಮೇಲೆ ಮಿತಿಮೀರಿದ ಜನಸಂದಣಿ ಇತ್ತು. ಹೀಗಾಗಿ ಅದರ ಭಾರದಿಂದ ಈ ಅನಾಹುತ ಸಂಭವಿಸಿರಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT