ಸೇತುವೆ ಮೇಲೆ ಕಿಕ್ಕಿರಿಸಿದ್ದ ಜನರು 
ದೇಶ

80 ಜನರನ್ನು ಬಲಿ ಪಡೆದ ಗುಜರಾತ್ ನ ಕೇಬಲ್ ಸೇತುವೆ ದುರಂತಕ್ಕೆ ಕಾರಣ?

ಗುಜರಾತ್ ನಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಮೊರ್ಬಿ ಪ್ರದೇಶದಲ್ಲಿ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕೇಬಲ್ ಸೇತುವೆ ಕುಸಿದು ಸದ್ಯ 80 ಮಂದಿ ಮೃತಪಟ್ಟಿದ್ದು ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ.

ಅಹಮದಾಬಾದ್: ಗುಜರಾತ್ ನಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಮೊರ್ಬಿ ಪ್ರದೇಶದಲ್ಲಿ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕೇಬಲ್ ಸೇತುವೆ ಕುಸಿದು ಸದ್ಯ 80 ಮಂದಿ ಮೃತಪಟ್ಟಿದ್ದು ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ.

ಸಂಜೆ 6.30ರ ಸುಮಾರಿಗೆ ಈ ದುರಂತ ಸಂಭವಿಸಿದ್ದು ಈ ವೇಳೆ ಸೇತುವೆ ಮೇಲೆ ಮಕ್ಕಳು, ವೃದ್ಧರೂ ಸೇರಿದಂತೆ 400ಕ್ಕೂ ಹೆಚ್ಚು ಜನರು ನೆರೆದಿದ್ದರು. ಸೇತುವೆ ಕುಸಿತದಿಂದಾಗಿ ಹಲವಾರು ಜನರು ನದಿಗೆ ಬಿದ್ದಿದ್ದಾರೆ. ಸದ್ಯ 250ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದ್ದು ಕಾರ್ಯಾಚರಣೆ ಭರದಿಂದ ಸಾಗಿದೆ. ಪೊಲೀಸರು, ಅಗ್ನಿಶಾಮಕ ತುರ್ತು ಸೇವೆಗಳು ಮತ್ತು ಮೂರು ಎನ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿವೆ. 

ಇನ್ನು ಮೋರ್ಬಿ ಕೇಬಲ್ ಸೇತುವೆಯ ವಿಡಿಯೋವೊಂದು ವೈರಲ್ ಆಗಿದೆ. ವಿಡಿಯೋದಲ್ಲಿ ಸೇತುವೆ ಮೇಲೆ ಜನರು ಕಿಕ್ಕಿರಿದು ತುಂಬಿರುವುದು ಕಾಣಬಹುದಾಗಿದೆ. ಇನ್ನು ಕೆಲ ಯುವಕರು ಹುಚ್ಚಾಟ ಮೆರೆದಿದ್ದಾರೆ. ಸೇತುವೆಗೆ ಅಳವಡಿಸಿದ್ದ ಕಬ್ಬಿಣದ ಸರಳುಗಳನ್ನು ಕಾಲಿನಿಂದ ಒದೆಯುತ್ತಿರುವುದು ಮೊಬೈಲ್ ನಲ್ಲಿ ಸೆರೆಯಾಗಿದೆ.

ಘಟನೆ ಕುರಿತಂತೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಗುಜರಾತ್ ಸಿಎಂ ಭುಪೇಂದ್ರ ಸಿಂಗ್ ಆಘಾತ ವ್ಯಕ್ತಪಡಿಸಿದ್ದು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಸೇತುವೆಯ ನವೀಕರಣ ಕಾಮಗಾರಿ ಕೇವಲ ಒಂದು ವಾರದ ಹಿಂದೆ ಮುಕ್ತಾಯಗೊಂಡಿತ್ತು. ಮೂರು ದಿನಗಳ ಹಿಂದೆ ಸೇತುವೆಯನ್ನು ಮತ್ತೊಮ್ಮೆ ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿತ್ತು. ಹೀಗಾಗಿ ನೂರಾರು ಜನರು ಸೇತುವೆಯನ್ನು ವೀಕ್ಷಿಸಲು ಬಂದಿದ್ದಾಗ ಈ ದುರುಂತ ಸಂಭವಿಸಿದೆ.

ಇನ್ನು ಅಧಿಕಾರಿಗಳು ವಿವರಿಸುವಂತೆ ಸೇತುವೆ ಮೇಲೆ ಮಿತಿಮೀರಿದ ಜನಸಂದಣಿ ಇತ್ತು. ಹೀಗಾಗಿ ಅದರ ಭಾರದಿಂದ ಈ ಅನಾಹುತ ಸಂಭವಿಸಿರಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ