ಯಮುನಾ ನೀರಿನಿಂದ ಸ್ನಾನ ಮಾಡುತ್ತಿರುವ ದೆಹಲಿ ಜಲಮಂಡಳಿ ಅಧಿಕಾರಿ. 
ದೇಶ

ಯಮುನಾ ನೀರು ಶುದ್ಧವಾಗಿದೆ ಎಂದು ನಿರೂಪಿಸಲು ಅದೇ ನೀರಿನಲ್ಲಿ ಸ್ನಾನ ಮಾಡಿದ ದೆಹಲಿ ಜಲಮಂಡಳಿ ನಿರ್ದೇಶಕ!

ಯಮುನಾ ನದಿ ನೀರು ಕಲುಷಿತವಾಗಿದೆ ಎಂದು ಆರೋಪಗಳು ಕೇಳಿ ಬಂದ ಹಿನ್ನೆಲೆ ನೀರು ಶುದ್ಧವಾಗಿದೆ ಎಂದು ಸಾಬೀತುಪಡಿಸಲು ದೆಹಲಿಯ ಜಲ ಮಂಡಳಿ ನಿರ್ದೇಶಕರು ಅದೇ ನೀರಿನಲ್ಲಿ ಸ್ನಾನ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ನವದೆಹಲಿ: ಯಮುನಾ ನದಿ ನೀರು ಕಲುಷಿತವಾಗಿದೆ ಎಂದು ಆರೋಪಗಳು ಕೇಳಿ ಬಂದ ಹಿನ್ನೆಲೆ ನೀರು ಶುದ್ಧವಾಗಿದೆ ಎಂದು ಸಾಬೀತುಪಡಿಸಲು ದೆಹಲಿಯ ಜಲ ಮಂಡಳಿ ನಿರ್ದೇಶಕರು ಅದೇ ನೀರಿನಲ್ಲಿ ಸ್ನಾನ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ದೆಹಲಿಯಲ್ಲಿ ಛತ್ ಪೂಜೆ ಸಮೀಪಿಸುತ್ತಿದ್ದಂತೆ ಯಮುನಾ ನದಿ ನೀರಿಗೆ ರಾಸಾಯನಿಕ ಸಿಂಪಡಿಸಿ ಶುಚಿಗೊಳಿಸಲಾಗಿದೆ. ಇದರಿಂದ ನದಿ ನೀರು ವಿಷಪೂರಿತವಾಗಿದ್ದು, ಕಲುಷಿತಗೊಂಡಿದೆ ಎಂಬ ಆರೋಪ ಕೇಳಿ ಬಂದಿತ್ತು.

ಪಶ್ಚಿಮ ದೆಹಲಿಯ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಅವರು, ಯಮುನಾದ ಕಾಳಿಂದಿ ಕುಂಜ್ ಘಾಟ್‍ಗೆ ಭೇಟಿ ನೀಡಿದ್ದರು. ಈ ವೇಳೆ ಕೆಲ ಆರೋಪಗಳನ್ನು ಮಾಡಿದ್ದರು. ಛತ್ ಪೂಜೆಗೂ ಮುನ್ನ ದೆಹಲಿ ಜಲಮಂಡಳಿ ಅಧಿಕಾರಿಗಳು ನದಿಗೆ ಡಿಫೋಮರ್ ಕೆಮಿಕಲ್ ಅನ್ನು ಸಿಂಪಡಿಸಿದ್ದು, ರಾಸಾಯನಿಕ ಬಳಸಿದ್ದರಿಂದ ನದಿ ನೀರು ಕಲುಷಿತಗೊಂಡಿದೆ. ಇದರಿಂದ ಛತ್ ಪೂಜೆಯನ್ನು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾರಿದ್ದರು.

8 ವರ್ಷಗಳ ಬಳಿಕ ಈಗ ಇದನ್ನು ಸ್ವಚ್ಛಗೊಳಿಸಬೇಕು ಎಂದು ನೆನಪಾಗಿದ್ಯಾ? ಇಲ್ಲಿ ನೀವು ಸಾಕಷ್ಟು ಜನರನ್ನು ಕೊಲ್ಲುತ್ತಿದ್ದೀರಾ. ಎಂಟು ವರ್ಷಗಳಿಂದ ಯಮುನಾ ನದಿಯನ್ನು ಸ್ವಚ್ಛಗೊಳಿಸಲು ನಿಮಗೆ ಸಾಧ್ಯವಾಗಲಿಲ್ಲ. ಈಗ ಬಂದು ಇಲ್ಲಿ ಸ್ನಾನ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಜಲ ಮಂಡಳಿ ನಿರ್ದೇಶಕ ಸಂಜಯ್ ಶರ್ಮಾ ಅವರು ಯಮುನಾ ನದಿ ನೀರಿನಲ್ಲಿ ಸ್ನಾನ ಮಾಡಿ, ಇದರ ವಿಡಿಯೋ ಮಾಡಿ ನೀರು ಕಲುಷಿತಗೊಂಡಿಲ್ಲ ಎಂಬುದನ್ನು ಸಾಬೀತುಪಡಿಸಲು ಸಾಮಾಜಿಕ ಜಾಲತಾಣಗಳಲ್ಲಿ ಇದರ ವಿಡಿೋವನ್ನು ಪೋಸ್ಟ್ ಮಾಡಿದ್ದಾರೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಂಜಯ್ ಶರ್ಮಾ, ನೀರಿಗೆ ರಾಸಾಯನಿಕ ಸಿಂಪಡಿಸುವ ಮುನ್ನ ಈ ಬಗ್ಗೆ ಎಲ್ಲಾ ಮುಂಜಾಗೃತಾ ಕ್ರಮವನ್ನು ಕೈಗೊಳ್ಳಳಾಗಿತ್ತು. ಹಾಗಾಗಿ ನೀರು ಕಲುಷಿತಗೊಂಡಿಲ್ಲ. ಈ ನೀರಿನಿಂದ ಯಾವುದೇ ಸಮಸ್ಯೆಯಾಗಿಲ್ಲ. ಯಾವುದೇ ಸಮಸ್ಯೆ ಇಲ್ಲ ಎಂಬುದನ್ನು ನಿರೂಪಿಸಲು ಸ್ವತಃ ನಾನೇ ನೀರಿನಲ್ಲಿ ಸ್ನಾನ ಮಾಡಿದ್ದೇನೆ. ಸುಳ್ಳು ಆರೋಪಗಳು ಕೇಳಿ ಬಂದ ಕಾರಣ ಈ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT