ಸಾಂದರ್ಭಿಕ ಚಿತ್ರ 
ದೇಶ

ದಿ ವೈರ್ ಸಂಸ್ಥಾಪಕ ಸಿದ್ಧಾರ್ಥ್ ವರದರಾಜನ್, ಮೈಕ್ ವೇಣು ನಿವಾಸದ ಮೇಲೆ ದೆಹಲಿ ಪೊಲೀಸ್ ದಾಳಿ

ವೈರ್ ಸಂಸ್ಥಾಪಕ ಸಿದ್ಧಾರ್ಥ್ ವರದರಾಜನ್ ಮತ್ತು ಸಂಪಾದಕ ಎಂಕೆ ವೇಣು ಅವರ ಮನೆಗಳ ಮೇಲೆ ದೆಹಲಿ ಪೊಲೀಸರು ಸೋಮವಾರ ರಾತ್ರಿ ದಾಳಿ ನಡೆಸಿದ್ದಾರೆ.

ನವದೆಹಲಿ: ವೈರ್ ಸಂಸ್ಥಾಪಕ ಸಿದ್ಧಾರ್ಥ್ ವರದರಾಜನ್ ಮತ್ತು ಸಂಪಾದಕ ಎಂಕೆ ವೇಣು ಅವರ ಮನೆಗಳ ಮೇಲೆ ದೆಹಲಿ ಪೊಲೀಸರು ಸೋಮವಾರ ರಾತ್ರಿ ದಾಳಿ ನಡೆಸಿದ್ದಾರೆ.

ಯಾರನ್ನೂ ಬಂಧಿಸಿಲ್ಲ ಅಥವಾ ವಶಕ್ಕೆ ಪಡೆದಿಲ್ಲ ಎಂದು ಹೇಳಿರುವ ಪೊಲೀಸರು, ಪ್ರಸ್ತುತ 'ದಿ ವೈರ್' ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಸಾಕ್ಷ್ಯವನ್ನು ಸಂಗ್ರಹಿಸುವ ಸಲುವಾಗಿ ಜೋಡಿ ಎಲೆಕ್ಟ್ರಾನಿಕ್ ಸಾಧನಗಳನ್ನು ಶೋಧಿಸುತ್ತಿರುವುದಾಗಿ ತಿಳಿಸಿದ್ದಾರೆ.

ದೆಹಲಿ ಪೊಲೀಸರು ಬಿಜೆಪಿಯ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯಾ ಅವರ ದೂರಿನ ಆಧಾರದ ಮೇಲೆ 'ದಿ ವೈರ್' ಮತ್ತು ಅದರ ಸಂಪಾದಕರ ವಿರುದ್ಧ ಕಳೆದ ಶನಿವಾರ ಎಫ್‌ಐಆರ್ ದಾಖಲಿಸಿದ್ದಾರೆ. 

"ವಂಚನೆ ಮತ್ತು ಫೋರ್ಜರಿ" ಹಾಗೂ ಪ್ರತಿಷ್ಠೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಅಮಿತ್ ಮಾಳವೀಯಾ ದೂರು ನೀಡಿದ್ದರು.

ಮಾಳವೀಯ ಅವರು ಸಾಮಾಜಿಕ ಮಾಧ್ಯಮ ಸಂಸ್ಥೆ ಮೆಟಾದಲ್ಲಿ(ಫೇಸ್‌ಬುಕ್‌ ಮಾತೃಸಂಸ್ಥೆ) ತಮ್ಮ ವಿಶೇಷ ಅಧಿಕಾರ ಬಳಸಿಕೊಂಡು 700 ಕ್ಕೂ ಹೆಚ್ಚು ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಿಂದ ತೆಗೆದುಹಾಕಿದ್ದಾರೆ ಎಂಬ ವರದಿಗೆ ಸಂಬಂಧಿಸಿದಂತೆ ದಿ ವೈರ್ ಮತ್ತು ಅದರ ಸಂಸ್ಥಾಪಕ, ಸಂಪಾದಕರ ವಿರುದ್ಧ ದೂರು ದಾಖಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT